ಮನರಂಜನೆ

ನಟಿ ಶುಭಾ ಪೂಂಜಾ ವೈವಾಹಿಕ ಜೀವನದಲ್ಲಿ ಬಿರುಗಾಳಿ ; ವಿಚ್ಛೇದನಕ್ಕೆ ಮೊರೆ ಹೋದ ದಂಪತಿ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಿ ಶುಭಾ ಪೂಂಜಾ ಅವರ ವೈವಾಹಿಕ ಜೀವನದಲ್ಲಿ ಬಿರುಗಾಳಿ ಎದ್ದಿದ್ದು, ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಲು ದಂಪತಿ ನಿರ್ಧರಿಸಿದ್ದಾರೆ. ಮದುವೆಯಾಗಿ ನಾಲ್ಕೇ ವರ್ಷಕ್ಕೆ ನಟಿ ಶುಭಾ ಪೂಂಜಾ ಹಾಗೂ ಅವರ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ.

ಕನ್ನಡಪರ ಹೋರಾಟಗಾರ ಹಾಗೂ ಉದ್ಯಮಿಯಾಗಿರುವ ಉಡುಪಿ ಮೂಲದ ಸುಮಂತ್ ಬಿಲ್ಲವ ಮತ್ತು ನಟಿ ಶುಭಾ ಪೂಂಜಾ ಅವರು ಕೆಲವು ವರ್ಷಗಳ ಕಾಲ ಪ್ರೀತಿಸುತ್ತಿದ್ದರು. ನಂತರ 2022ರ ಜನವರಿ 5 ರಂದು ಶುಭಾ ಪೂಂಜಾ ಅವರ ಸ್ವಂತ ಊರಿನಲ್ಲಿ ಅತ್ಯಂತ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಈಗ ಇವರಿಬ್ಬರು ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ಪ್ರಕ್ರಿಯೆಯ ಭಾಗವಾಗಿ ಇಂದು ಅಥವಾ ಮುಂದಿನ ವಿಚಾರಣೆಯ ದಿನದಂದು ಶುಭಾ ಪೂಂಜಾ ಮತ್ತು ಸುಮಂತ್ ಬಿಲ್ಲವ ಫ್ಯಾಮಿಲಿ ಕೋರ್ಟ್‌ನಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗುವ ಸಾಧ್ಯತೆಯಿದೆ.

ನಾಲ್ಕು ವರ್ಷಗಳ ಸುಂದರ ಸಂಸಾರದಲ್ಲಿ ಹಠಾತ್ತನೆ ಇಂತಹ ಬಿರುಕು ಮೂಡಲು ನಿಖರವಾದ ಕಾರಣವೇನು ಎಂಬುದು ಇನ್ನು ಅಧಿಕೃತವಾಗಿ ಹೊರಬಂದಿಲ್ಲ. ಈ ಕುರಿತು ಮಾಧ್ಯಮಗಳು ಸಂಪರ್ಕಿಸಿದಾಗ, ವಿಚ್ಛೇದನಕ್ಕೆ ಕಾರಣವನ್ನು ಬಹಿರಂಗಪಡಿಸಲು ಸುಮಂತ್ ಬಿಲ್ಲವ ನಿರಾಕರಿಸಿದ್ದಾರೆ. ತಮ್ಮ ವೈಯಕ್ತಿಕ ಜೀವನದ ನಿರ್ಧಾರವನ್ನು ಗೌರವಿಸಬೇಕಾಗಿ ಅವರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

2 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

3 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

4 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

7 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

8 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

8 hours ago