ಮನರಂಜನೆ

ಅದ್ದೂರಿಯಾಗಿ ನಡೆದ ಸೋನಾಕ್ಷಿ-ಇಕ್ಬಾಲ್‌ ಅಂತರ್‌ಧರ್ಮೀಯ ಮದುವೆ!

ಬಿ ಟೌನ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಭಾನುವಾರ (ಜೂನ್‌.23) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರ ಬಹು ಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಅವರೊಂದಿಗೆ ವಿವಾಹವಾಗುವ ಮೂಲಕ ಬಿಟೌನ್‌ ಅಂಗಳದಲ್ಲಿ ಮತ್ತೊಂದು ಅಂತರ್‌ಧರ್ಮೀಯ ಮದುವೆಗೆ ಸಾಕ್ಷಿಯಾದರು.

ಮುಂಬೈನಲ್ಲಿ ತಮ್ಮ ಕುಟುಂಬ, ಆಪ್ತರ ಸಮ್ಮುಖದಲ್ಲಿ ಈ ನವಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆಯಿತು. ಈ ಮದವೆಯ ವಿಶೇಷತೆಯೆಂದರೆ ಇಂದೊಂದು ಅಂತರ್‌ಧರ್ಮೀಯ ಮದುವೆಯಾಗಿದ್ದು, ಪರಸ್ಪರ ಎರಡು ಕುಟುಂಬಗಳು ಒಪ್ಪಿ ಈ ಮದುವೆ ನಡೆಸಿಕೊಟ್ಟಿವೆ.

ಸೋನಾಕ್ಷಿ ಸಿನ್ಹಾ ಅವರು ಕಳೆದ 7 ವರ್ಷಗಳಿಂದ ಇಕ್ಬಾಲ್‌ ಅವರನ್ನು ಪ್ರೀತಿಸುತ್ತಿದ್ದು ಈ ವಿಚಾರವನ್ನು ಗೌಪ್ಯವಾಗಿ ಕಾಪಾಡಿಕೊಂಡು ಬಂದಿದ್ದಾರೆ. 7 ವರ್ಷಗಳ ಹಿಂದೆ ತಾವು ಪ್ರೀತಿ ಆರಂಭಿಸಿದ ದಿನವಾದ ಜೂನ್‌. 23 ದಿನಾಂಕದಂದೆ ಈ ಪ್ರೇಮಿಗಳ ಮದುವೆಯೂ ನಡೆದಿದೆ.

ಇನ್ನು ಈ ಪ್ರೀತಿ ಮದುವೆಯವರೆಗೆ ನಡೆದ ಹಾದಿಯ ಬಗ್ಗೆ ನಟಿ ಸೊನಾಕ್ಷಿ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪೋಟೋ ಒಂದನ್ನು ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು, “ಇದೇ ದಿನ, ಏಳು ವರ್ಷಗಳ ಹಿಂದೆ (23.06.2017) ಪರಸ್ಪರರ ಕಣ್ಣುಗಳಲ್ಲಿ, ನಾವು ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಡಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿಯು ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ ನಮಗೆ ಮಾರ್ಗದರ್ಶನ ನೀಡಿದೆ … ಈ ಕ್ಷಣದವರೆಗೆ ಮುನ್ನಡೆಸಿದೆ … ಅಲ್ಲಿ ನಮ್ಮ ಎರಡೂ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ … ನಾವು ಈಗ ಪುರುಷ ಮತ್ತು ಹೆಂಡತಿಯಾಗಿದ್ದೇವೆ.

ಇಲ್ಲಿ ಪ್ರೀತಿ, ಭರವಸೆ ಮತ್ತು ಪರಸ್ಪರ ಸುಂದರವಾಗಿರುವ ಎಲ್ಲಾ ವಿಷಯಗಳು, ಇಂದಿನಿಂದ ಶಾಶ್ವತವಾಗಿ ಇರಲಿದೆ ಎಂದು ತಮ್ಮ ಇನ್ಸ್ಟಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶ್ರೀ ಮುತ್ತಪ್ಪ ಭಗವತಿ ದೇವಾಲಯದ ವಾರ್ಷಿಕೋತ್ಸವಕ್ಕೆ ತೆರೆ

ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…

13 hours ago

ಹನೂರು| ಆಕಸ್ಮಿಕ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…

13 hours ago

ಗಾಂಜಾ ಮಾರಾಟ, ಸೇವನೆ: ಪ್ರತ್ಯೇಕ ಪ್ರಕರಣದಲ್ಲಿ ನಾಲ್ವರ ಬಂಧನ

ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…

13 hours ago

ಹನೂರು| ತಾಲ್ಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…

13 hours ago

ಟಿ.ನರಸೀಪುರ: ಕೆಎಸ್‌ಐಸಿ ಫ್ಯಾಕ್ಟರಿ ಆವರಣದಲ್ಲಿ ಸ್ಟೇಡಿಯಂ ನಿರ್ಮಿಸುವ ಪ್ರಸ್ತಾವನೆ: ಬೀದಿಗಿಳಿದ ಕಾರ್ಮಿಕರು

ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್‌ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…

14 hours ago

ಕೇರಳ ಇನ್ನು ಮುಂದೆ ಕೇರಳಂ: ಹೆಸರು ಬದಲಾವಣೆಗೆ ಕೇಂದ್ರ ಸರ್ಕಾರ ಅಸ್ತು

ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…

14 hours ago