ಮನರಂಜನೆ

ಅದ್ದೂರಿಯಾಗಿ ನಡೆದ ಸೋನಾಕ್ಷಿ-ಇಕ್ಬಾಲ್‌ ಅಂತರ್‌ಧರ್ಮೀಯ ಮದುವೆ!

ಬಿ ಟೌನ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಭಾನುವಾರ (ಜೂನ್‌.23) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರ ಬಹು ಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಅವರೊಂದಿಗೆ ವಿವಾಹವಾಗುವ ಮೂಲಕ ಬಿಟೌನ್‌ ಅಂಗಳದಲ್ಲಿ ಮತ್ತೊಂದು ಅಂತರ್‌ಧರ್ಮೀಯ ಮದುವೆಗೆ ಸಾಕ್ಷಿಯಾದರು.

ಮುಂಬೈನಲ್ಲಿ ತಮ್ಮ ಕುಟುಂಬ, ಆಪ್ತರ ಸಮ್ಮುಖದಲ್ಲಿ ಈ ನವಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆಯಿತು. ಈ ಮದವೆಯ ವಿಶೇಷತೆಯೆಂದರೆ ಇಂದೊಂದು ಅಂತರ್‌ಧರ್ಮೀಯ ಮದುವೆಯಾಗಿದ್ದು, ಪರಸ್ಪರ ಎರಡು ಕುಟುಂಬಗಳು ಒಪ್ಪಿ ಈ ಮದುವೆ ನಡೆಸಿಕೊಟ್ಟಿವೆ.

ಸೋನಾಕ್ಷಿ ಸಿನ್ಹಾ ಅವರು ಕಳೆದ 7 ವರ್ಷಗಳಿಂದ ಇಕ್ಬಾಲ್‌ ಅವರನ್ನು ಪ್ರೀತಿಸುತ್ತಿದ್ದು ಈ ವಿಚಾರವನ್ನು ಗೌಪ್ಯವಾಗಿ ಕಾಪಾಡಿಕೊಂಡು ಬಂದಿದ್ದಾರೆ. 7 ವರ್ಷಗಳ ಹಿಂದೆ ತಾವು ಪ್ರೀತಿ ಆರಂಭಿಸಿದ ದಿನವಾದ ಜೂನ್‌. 23 ದಿನಾಂಕದಂದೆ ಈ ಪ್ರೇಮಿಗಳ ಮದುವೆಯೂ ನಡೆದಿದೆ.

ಇನ್ನು ಈ ಪ್ರೀತಿ ಮದುವೆಯವರೆಗೆ ನಡೆದ ಹಾದಿಯ ಬಗ್ಗೆ ನಟಿ ಸೊನಾಕ್ಷಿ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪೋಟೋ ಒಂದನ್ನು ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು, “ಇದೇ ದಿನ, ಏಳು ವರ್ಷಗಳ ಹಿಂದೆ (23.06.2017) ಪರಸ್ಪರರ ಕಣ್ಣುಗಳಲ್ಲಿ, ನಾವು ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಡಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿಯು ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ ನಮಗೆ ಮಾರ್ಗದರ್ಶನ ನೀಡಿದೆ … ಈ ಕ್ಷಣದವರೆಗೆ ಮುನ್ನಡೆಸಿದೆ … ಅಲ್ಲಿ ನಮ್ಮ ಎರಡೂ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ … ನಾವು ಈಗ ಪುರುಷ ಮತ್ತು ಹೆಂಡತಿಯಾಗಿದ್ದೇವೆ.

ಇಲ್ಲಿ ಪ್ರೀತಿ, ಭರವಸೆ ಮತ್ತು ಪರಸ್ಪರ ಸುಂದರವಾಗಿರುವ ಎಲ್ಲಾ ವಿಷಯಗಳು, ಇಂದಿನಿಂದ ಶಾಶ್ವತವಾಗಿ ಇರಲಿದೆ ಎಂದು ತಮ್ಮ ಇನ್ಸ್ಟಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

8 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

14 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

14 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

14 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago