ಮನರಂಜನೆ

ಅದ್ದೂರಿಯಾಗಿ ನಡೆದ ಸೋನಾಕ್ಷಿ-ಇಕ್ಬಾಲ್‌ ಅಂತರ್‌ಧರ್ಮೀಯ ಮದುವೆ!

ಬಿ ಟೌನ್‌ನ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ಅವರು ಭಾನುವಾರ (ಜೂನ್‌.23) ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಅವರ ಬಹು ಕಾಲದ ಗೆಳೆಯ ಜಹೀರ್‌ ಇಕ್ಬಾಲ್‌ ಅವರೊಂದಿಗೆ ವಿವಾಹವಾಗುವ ಮೂಲಕ ಬಿಟೌನ್‌ ಅಂಗಳದಲ್ಲಿ ಮತ್ತೊಂದು ಅಂತರ್‌ಧರ್ಮೀಯ ಮದುವೆಗೆ ಸಾಕ್ಷಿಯಾದರು.

ಮುಂಬೈನಲ್ಲಿ ತಮ್ಮ ಕುಟುಂಬ, ಆಪ್ತರ ಸಮ್ಮುಖದಲ್ಲಿ ಈ ನವಜೋಡಿ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆಯಿತು. ಈ ಮದವೆಯ ವಿಶೇಷತೆಯೆಂದರೆ ಇಂದೊಂದು ಅಂತರ್‌ಧರ್ಮೀಯ ಮದುವೆಯಾಗಿದ್ದು, ಪರಸ್ಪರ ಎರಡು ಕುಟುಂಬಗಳು ಒಪ್ಪಿ ಈ ಮದುವೆ ನಡೆಸಿಕೊಟ್ಟಿವೆ.

ಸೋನಾಕ್ಷಿ ಸಿನ್ಹಾ ಅವರು ಕಳೆದ 7 ವರ್ಷಗಳಿಂದ ಇಕ್ಬಾಲ್‌ ಅವರನ್ನು ಪ್ರೀತಿಸುತ್ತಿದ್ದು ಈ ವಿಚಾರವನ್ನು ಗೌಪ್ಯವಾಗಿ ಕಾಪಾಡಿಕೊಂಡು ಬಂದಿದ್ದಾರೆ. 7 ವರ್ಷಗಳ ಹಿಂದೆ ತಾವು ಪ್ರೀತಿ ಆರಂಭಿಸಿದ ದಿನವಾದ ಜೂನ್‌. 23 ದಿನಾಂಕದಂದೆ ಈ ಪ್ರೇಮಿಗಳ ಮದುವೆಯೂ ನಡೆದಿದೆ.

ಇನ್ನು ಈ ಪ್ರೀತಿ ಮದುವೆಯವರೆಗೆ ನಡೆದ ಹಾದಿಯ ಬಗ್ಗೆ ನಟಿ ಸೊನಾಕ್ಷಿ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಈ ಬಗ್ಗೆ ಪೋಟೋ ಒಂದನ್ನು ಹಂಚಿಕೊಂಡು ಪೋಸ್ಟ್‌ ಮಾಡಿರುವ ಅವರು, “ಇದೇ ದಿನ, ಏಳು ವರ್ಷಗಳ ಹಿಂದೆ (23.06.2017) ಪರಸ್ಪರರ ಕಣ್ಣುಗಳಲ್ಲಿ, ನಾವು ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಡಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿಯು ಎಲ್ಲಾ ಸವಾಲುಗಳು ಮತ್ತು ವಿಜಯಗಳ ಮೂಲಕ ನಮಗೆ ಮಾರ್ಗದರ್ಶನ ನೀಡಿದೆ … ಈ ಕ್ಷಣದವರೆಗೆ ಮುನ್ನಡೆಸಿದೆ … ಅಲ್ಲಿ ನಮ್ಮ ಎರಡೂ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ … ನಾವು ಈಗ ಪುರುಷ ಮತ್ತು ಹೆಂಡತಿಯಾಗಿದ್ದೇವೆ.

ಇಲ್ಲಿ ಪ್ರೀತಿ, ಭರವಸೆ ಮತ್ತು ಪರಸ್ಪರ ಸುಂದರವಾಗಿರುವ ಎಲ್ಲಾ ವಿಷಯಗಳು, ಇಂದಿನಿಂದ ಶಾಶ್ವತವಾಗಿ ಇರಲಿದೆ ಎಂದು ತಮ್ಮ ಇನ್ಸ್ಟಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

30 mins ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

2 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

3 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

3 hours ago

ಮಹದೇಶ್ವರ ಬೆಟ್ಟದಲ್ಲಿ ಬಸ್‌ ಪಲ್ಟಿ : ಹಲವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…

3 hours ago

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…

8 hours ago