ಮನರಂಜನೆ

ಐದು ವರ್ಷಗಳ ನಂತರ ಮತ್ತೆ ಹೀರೋ ಅದ ಭುವನ್‍ ಪೊನ್ನಣ್ಣ

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್‍ ಭಟ್‍ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ.

ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಮನದ ಕಡಲು’ ಚಿತ್ರದ ನಂತರ ಯೋಗರಾಜ್‍ ಭಟ್‍ ಯಾವೊಂದು ಚಿತ್ರದಲ್ಲೂ ನಿರ್ದೇಶಿಸಿರಲಿಲ್ಲ. ‘ಮತ್ತೆ ಮೊದಲಿಂದ’ ಎಂಬ ಆಲ್ಬಂ ರೂಪಿಸುವಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ‘ಹಲೋ 123’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಭುವನ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಮೃತಾ ಸಿನಿಕ್ರಾಫ್ಟ್ ಸಂಸ್ಥೆಯ ಮೂಲಕ ಏಳು ಚಿತ್ರಗಳನ್ನು ಘೋಷಿಸಿದ್ದ ವಿಜಯ್‍ ಟಾಟಾ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ, ‘ಹಲೋ 123’ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣಗೊಂಡಿದೆ. ಹರ್ಷಿಕಾ ಹಾಗೂ ಭುವನ್ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭುವನ್‍, ಯೋಗರಾಜ್‍ ಭಟ್‍ ಮತ್ತು ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿರುವ ವಿ. ಹರಿಕೃಷ್ಣಗೆ ಅಡ್ವಾನ್ಸ್ ಕೊಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

ಸದ್ಯಕ್ಕೆ ಶೀರ್ಷಿಕೆ ಅನಾವರಣವಾಗುವುದರ ಜೊತೆಗೆ ಸ್ಕ್ರಿಪ್ಟ್ ಪೂಜೆ ನಡೆದಿದೆ. ಉಳಿದ ಕೆಲಸಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಯೋಗರಾಜ್‍ ಭಟ್‍ ಅಮೇರಿಕಾ ಪ್ರವಾಸ ಹೊರಟಿದ್ದು, ಅವರು ಬಂದ ನಂತರ ಉಳಿದ ಕೆಲಸಗಳು ಶುರುವಾಗಲಿದ್ದು, ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆಯಂತೆ. ಎಲ್ಲಾ ಅಂದುಕೊಂಡಂಗೆ ಆದರೆ, ‘ಹಲೋ 123’ ಮುಂದಿನ ವರ್ಷ ಮಾರ್ಚ್ ವೇಳೆಗೆ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

44 mins ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

1 hour ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago