ಮನರಂಜನೆ

ಐದು ವರ್ಷಗಳ ನಂತರ ಮತ್ತೆ ಹೀರೋ ಅದ ಭುವನ್‍ ಪೊನ್ನಣ್ಣ

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್‍ ಭಟ್‍ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ.

ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಮನದ ಕಡಲು’ ಚಿತ್ರದ ನಂತರ ಯೋಗರಾಜ್‍ ಭಟ್‍ ಯಾವೊಂದು ಚಿತ್ರದಲ್ಲೂ ನಿರ್ದೇಶಿಸಿರಲಿಲ್ಲ. ‘ಮತ್ತೆ ಮೊದಲಿಂದ’ ಎಂಬ ಆಲ್ಬಂ ರೂಪಿಸುವಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ‘ಹಲೋ 123’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಭುವನ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಮೃತಾ ಸಿನಿಕ್ರಾಫ್ಟ್ ಸಂಸ್ಥೆಯ ಮೂಲಕ ಏಳು ಚಿತ್ರಗಳನ್ನು ಘೋಷಿಸಿದ್ದ ವಿಜಯ್‍ ಟಾಟಾ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ, ‘ಹಲೋ 123’ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣಗೊಂಡಿದೆ. ಹರ್ಷಿಕಾ ಹಾಗೂ ಭುವನ್ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭುವನ್‍, ಯೋಗರಾಜ್‍ ಭಟ್‍ ಮತ್ತು ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿರುವ ವಿ. ಹರಿಕೃಷ್ಣಗೆ ಅಡ್ವಾನ್ಸ್ ಕೊಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

ಸದ್ಯಕ್ಕೆ ಶೀರ್ಷಿಕೆ ಅನಾವರಣವಾಗುವುದರ ಜೊತೆಗೆ ಸ್ಕ್ರಿಪ್ಟ್ ಪೂಜೆ ನಡೆದಿದೆ. ಉಳಿದ ಕೆಲಸಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಯೋಗರಾಜ್‍ ಭಟ್‍ ಅಮೇರಿಕಾ ಪ್ರವಾಸ ಹೊರಟಿದ್ದು, ಅವರು ಬಂದ ನಂತರ ಉಳಿದ ಕೆಲಸಗಳು ಶುರುವಾಗಲಿದ್ದು, ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆಯಂತೆ. ಎಲ್ಲಾ ಅಂದುಕೊಂಡಂಗೆ ಆದರೆ, ‘ಹಲೋ 123’ ಮುಂದಿನ ವರ್ಷ ಮಾರ್ಚ್ ವೇಳೆಗೆ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

9 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

9 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

10 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

10 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

11 hours ago