ಮನರಂಜನೆ

ಐದು ವರ್ಷಗಳ ನಂತರ ಮತ್ತೆ ಹೀರೋ ಅದ ಭುವನ್‍ ಪೊನ್ನಣ್ಣ

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್‍ ಭಟ್‍ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ.

ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಮನದ ಕಡಲು’ ಚಿತ್ರದ ನಂತರ ಯೋಗರಾಜ್‍ ಭಟ್‍ ಯಾವೊಂದು ಚಿತ್ರದಲ್ಲೂ ನಿರ್ದೇಶಿಸಿರಲಿಲ್ಲ. ‘ಮತ್ತೆ ಮೊದಲಿಂದ’ ಎಂಬ ಆಲ್ಬಂ ರೂಪಿಸುವಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ‘ಹಲೋ 123’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಭುವನ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಮೃತಾ ಸಿನಿಕ್ರಾಫ್ಟ್ ಸಂಸ್ಥೆಯ ಮೂಲಕ ಏಳು ಚಿತ್ರಗಳನ್ನು ಘೋಷಿಸಿದ್ದ ವಿಜಯ್‍ ಟಾಟಾ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ, ‘ಹಲೋ 123’ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣಗೊಂಡಿದೆ. ಹರ್ಷಿಕಾ ಹಾಗೂ ಭುವನ್ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭುವನ್‍, ಯೋಗರಾಜ್‍ ಭಟ್‍ ಮತ್ತು ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿರುವ ವಿ. ಹರಿಕೃಷ್ಣಗೆ ಅಡ್ವಾನ್ಸ್ ಕೊಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

ಸದ್ಯಕ್ಕೆ ಶೀರ್ಷಿಕೆ ಅನಾವರಣವಾಗುವುದರ ಜೊತೆಗೆ ಸ್ಕ್ರಿಪ್ಟ್ ಪೂಜೆ ನಡೆದಿದೆ. ಉಳಿದ ಕೆಲಸಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಯೋಗರಾಜ್‍ ಭಟ್‍ ಅಮೇರಿಕಾ ಪ್ರವಾಸ ಹೊರಟಿದ್ದು, ಅವರು ಬಂದ ನಂತರ ಉಳಿದ ಕೆಲಸಗಳು ಶುರುವಾಗಲಿದ್ದು, ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆಯಂತೆ. ಎಲ್ಲಾ ಅಂದುಕೊಂಡಂಗೆ ಆದರೆ, ‘ಹಲೋ 123’ ಮುಂದಿನ ವರ್ಷ ಮಾರ್ಚ್ ವೇಳೆಗೆ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಡ್ಯಾಂ ಗೇಟ್‌ ಬದಲಾವಣೆಗೆ ನಿರ್ಧಾರ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ…

11 hours ago

ಗೃಹ ಬಳಕೆ ಗ್ಯಾಸ್‌ ಸಿಲಿಂಡರ್‌ಗೆ ಸಮಸ್ಯೆ ಇಲ್ಲ: ಸಚಿವ ಮುನಿಯಪ್ಪ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಗ್ಯಾಸ್‌ ಸಿಲಿಂಡರ್‌ ಕೊರತೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಆಹಾರ ಇಲಾಖೆ ಸಚಿವ ಮುನಿಯಪ್ಪ ಪ್ರತಿಕ್ರಿಯೆ…

12 hours ago

ಗುಂಡ್ಲುಪೇಟೆ: ಬರಗಿ ಗ್ರಾಮದಲ್ಲಿ ದೇವಸ್ಥಾನದ ಬಾಗಿಲು ಮುರಿದು ದೇವರನ್ನೇ ಹೊತ್ತೋಯ್ದ ಕಳ್ಳರು

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ದೇವಸ್ಥಾನಗಳ ಕಳ್ಳತನ ಪ್ರಕರಣ ಸಂಖ್ಯೆ ದಿನದಿಂದ ದಿನಕ್ಕೆ…

12 hours ago

ನಮ್‌ ಜೀವನ ನಮ್ದಲ್ಲಾ.? ಕನ್ನಡದಲ್ಲೇ ಪೋಸ್ಟ್‌ ಹಾಕಿದ ರಶ್ಮಿಕಾ ಮಂದಣ್ಣ

ವಿವಾಹದ ಬಳಿಕ ಭಾರೀ ಸುದ್ದಿಯಲ್ಲಿರುವ ನಟಿ ರಶ್ಮಿಕಾ ಮಂದಣ್ಣ ಅವರು ಕನ್ನಡದಲ್ಲಿಯೇ ಪೋಸ್ಟ್‌ ಒಂದನ್ನು ಹಾಕಿದ್ದಾರೆ. ಇಲ್ಲಿ ತನಕ ನನಗೆ…

12 hours ago

ಅನೈತಿಕ ಸಂಬಂಧ; ಜೋಡಿ ಕೊಲೆ: ಮಹಿಳೆ ಸೋದರನಿಂದಲೇ ಕೃತ್ಯ

ಮಡಿಕೇರಿ: ಅನೈತಿಕ ಸಂಬಂಧ ಹಿನ್ನೆಲೆ ಸಹೋದರಿ ಹಾಗೂ ಆಕೆಯ ಜೊತೆ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಯನ್ನು ೭೦ ವರ್ಷದ ವೃದ್ಧ…

12 hours ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಜಾಮೀನು ಮಂಜೂರು

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜುಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು…

12 hours ago