ಮನರಂಜನೆ

ಐದು ವರ್ಷಗಳ ನಂತರ ಮತ್ತೆ ಹೀರೋ ಅದ ಭುವನ್‍ ಪೊನ್ನಣ್ಣ

2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್‍ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್‍ ಭಟ್‍ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ.

ಈ ವರ್ಷ ಆರಂಭದಲ್ಲಿ ಬಿಡುಗಡೆಯಾದ ‘ಮನದ ಕಡಲು’ ಚಿತ್ರದ ನಂತರ ಯೋಗರಾಜ್‍ ಭಟ್‍ ಯಾವೊಂದು ಚಿತ್ರದಲ್ಲೂ ನಿರ್ದೇಶಿಸಿರಲಿಲ್ಲ. ‘ಮತ್ತೆ ಮೊದಲಿಂದ’ ಎಂಬ ಆಲ್ಬಂ ರೂಪಿಸುವಲ್ಲಿ ಬ್ಯುಸಿಯಾಗಿದ್ದರು. ಈಗ ಅವರು ‘ಹಲೋ 123’ ಎಂಬ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಅದರಲ್ಲಿ ಭುವನ್‍ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಅಮೃತಾ ಸಿನಿಕ್ರಾಫ್ಟ್ ಸಂಸ್ಥೆಯ ಮೂಲಕ ಏಳು ಚಿತ್ರಗಳನ್ನು ಘೋಷಿಸಿದ್ದ ವಿಜಯ್‍ ಟಾಟಾ, ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಇತ್ತೀಚೆಗೆ, ‘ಹಲೋ 123’ ಚಿತ್ರದ ಸ್ಕ್ರಿಪ್ಟ್ ಪೂಜೆ ಮತ್ತು ಶೀರ್ಷಿಕೆ ಅನಾವರಣಗೊಂಡಿದೆ. ಹರ್ಷಿಕಾ ಹಾಗೂ ಭುವನ್ ಪುತ್ರಿ ತ್ರಿದೇವಿ ಅಮೃತ ಹಸ್ತದಿಂದ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭುವನ್‍, ಯೋಗರಾಜ್‍ ಭಟ್‍ ಮತ್ತು ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿರುವ ವಿ. ಹರಿಕೃಷ್ಣಗೆ ಅಡ್ವಾನ್ಸ್ ಕೊಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.

ಸದ್ಯಕ್ಕೆ ಶೀರ್ಷಿಕೆ ಅನಾವರಣವಾಗುವುದರ ಜೊತೆಗೆ ಸ್ಕ್ರಿಪ್ಟ್ ಪೂಜೆ ನಡೆದಿದೆ. ಉಳಿದ ಕೆಲಸಗಳು ಇನ್ನಷ್ಟೇ ಪ್ರಾರಂಭವಾಗಬೇಕಿದೆ. ಯೋಗರಾಜ್‍ ಭಟ್‍ ಅಮೇರಿಕಾ ಪ್ರವಾಸ ಹೊರಟಿದ್ದು, ಅವರು ಬಂದ ನಂತರ ಉಳಿದ ಕೆಲಸಗಳು ಶುರುವಾಗಲಿದ್ದು, ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆಯಂತೆ. ಎಲ್ಲಾ ಅಂದುಕೊಂಡಂಗೆ ಆದರೆ, ‘ಹಲೋ 123’ ಮುಂದಿನ ವರ್ಷ ಮಾರ್ಚ್ ವೇಳೆಗೆ ಬಿಡುಗಡೆ ಆಗಲಿದೆ.

ಆಂದೋಲನ ಡೆಸ್ಕ್

Recent Posts

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

2 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

2 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

4 hours ago

ಅಧಿಕಾರಿಗಳಿಗೆ ಚೆಲ್ಲಾಟ; ಅಲೆಮಾರಿಗಳ ಅಲೆದಾಟ

ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…

4 hours ago

ಬಿಜೆಪಿ-ಜಾ.ದಳ ಮನಸ್ತಾಪ; ಸಿಎಂ ಡಿಕೆಶಿ ‘ಭವಿಷ್ಯ’ಕ್ಕೆ  ವರ?

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…

8 hours ago

ಎಚ್.ಡಿ.ಕೋಟೆ ಗಡಿಯಲ್ಲಿ ಸೇತುವೆ ನಿರ್ಮಾಣಕ್ಕೆ ಎನ್‌ಒಸಿ!

ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…

8 hours ago