ಮನರಂಜನೆ

ಕನ್ನಡ ಆಯ್ತು, ಇದೀಗ ತೆಲುಗು ‘ಬಿಗ್‍ ಬಾಸ್‍’ಗೆ ಎಂಟ್ರಿ ಕೊಟ್ಟ ಸಂಜನಾ ಗಲ್ರಾನಿ

ನಟಿ ಸಂಜನಾ ಗಲ್ರಾನಿ, ಕೆಲವು ವರ್ಷಗಳ ಹಿಂದೆ ‘ಬಿಗ್‍ ಬಾಸ್‍ ಕನ್ನಡ’ದ ಮೊದಲ ಸೀಸನ್‍ನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದು ಗೊತ್ತೇ ಇದೆ. ಇದೀಗ ಅವರು ‘ಬಿಗ್ ಬಾಸ್ ತೆಲುಗು – ಸೀಸನ್ 9’ರ 10ನೇ ಸ್ಪರ್ಧಿಯಾಗಿ ಮನೆಗೆ ಎಂಟ್ರಿ ಕೊಟ್ಟು ಅಚ್ಚರಿ ಮೂಡಿಸಿದ್ದಾರೆ.

ಸಂಜನಾ, ಕನ್ನಡವಲ್ಲದೆ ತೆಲುಗಿನಲ್ಲೂ ಚಿರಪರಿಚಿತ ಮುಖ. ‘ಗಂಡ ಹೆಂಡತಿ’ ಚಿತ್ರದ ಮೂಲಕ ಕನ್ನಡದಲ್ಲಿ ನಟಿಸುವ ಮೊದಲೇ ಅವರು ‘ಸೊಗ್ಗಾಡು’ ಎಂಬ ಚಿತ್ರದಲ್ಲಿ ನಟಿಸಿದ್ದರು. ಆ ನಂತರ, ಪ್ರಭಾಸ್‍ ಅಭಿನಯದ ‘ಬುಜ್ಜಿಗಾಡು’, ‘ಸತ್ಯಮೇವ ಜಯತೇ’ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದ್ದರು. 2017ರಲ್ಲಿ ಬಿಡುಗಡೆಯಾದ ಸುನೀಲ್‍ ಅಭಿನಯದ ‘2 ಕಂಟ್ರೀಸ್‍’ ಚಿತ್ರದಲ್ಲಿ ನಟಿಸಿದ ಮೇಲೆ ಅವರು ಯಾವುದೇ ತೆಲುಗು ಚಿತ್ರದಲ್ಲೂ ನಟಿಸಿರಲಿಲ್ಲ.

ಕೆಲವು ವರ್ಷಗಳ ಹಿಂದೆ ಮದುವೆ, ಮಗು ಆದ ಮೇಲೆ ಸಂಜನಾ, ಕನ್ನಡದಲ್ಲೂ ಯಾವುದೇ ಚಿತ್ರದಲ್ಲಿ ನಟಿಸಿರಲಿಲ್ಲ. ಸೋಶಿಯಲ್ ಮೀಡಿಯಾಗಳಲ್ಲಿ ಮಾತ್ರ ಸಕ್ರಿಯವಾಗಿದ್ದ ಅವರು, ಇದೀಗ ತೆಲುಗಿನ ‘ಬಿಗ್ ಬಾಸ್’ ವೇದಿಕೆ ಮೇಲೆ ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದಾರೆ.

ಕನ್ನಡದ ‘ಬಿಗ್‍ ಬಾಸ್‍’ ಕಾರ್ಯಕ್ರಮವು ಸೆ.28ರಿಂದ ಪ್ರಾರಂಭವಾಗಲಿದೆ. ಅದಕ್ಕೂ ಮೊದಲು ಶನಿವಾರ, ತೆಲುಗಿನ ಒಂಭತ್ತನೇ ಸೀಸನ್‍ ಪ್ರಾರಂಭವಾಗಿದೆ. ಈ ಕಾರ್ಯಕ್ರಮವನ್ನು ತೆಲುಗಿನ ಜನಪ್ರಿಯ ನಟ ಅಕ್ಕಿನೇನಿ ನಾಗಾರ್ಜುನ ನಡೆಸಿಕೊಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ 15 ಸ್ಪರ್ಧಿಗಳು ಭಾಗವಹಿಸುತ್ತಿದ್ದು, ಅದರಲ್ಲಿ ಸಂಜನಾ ಸಹ ಒಬ್ಬರು.

ಸಂಜನಾ ಇತ್ತೀಚೆಗಷ್ಟೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಾಲ್ಕು ತಿಂಗಳ ಮಗುವನ್ನು ಬಿಟ್ಟು, ಸಂಜನಾ ಇದೀಗ ‘ಬಿಗ್‍ ಬಾಸ್‍’ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ‘ಬಿಗ್‍ ಬಾಸ್‍’ ಮನೆಯಲ್ಲಿ ಇರುವಷ್ಟು ದಿನ ತನ್ನ ತಂದೆ – ತಾಯಿ ಮನೆಯಲ್ಲಿದ್ದು ಮಗುವನ್ನು ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ಈ ಬಾರಿಯ ತೆಲುಗು ‘ಬಿಗ್ ಬಾಸ್’ನಲ್ಲಿ ಸಂಜನಾ ಅಲ್ಲದೆ, ಫ್ಲೋರಾ ಸೈನಿ, ಕಲ್ಯಾನ್ ಪದಲ, ತನುಜಾ ಗೌಡ, ಶಾಸ್ತ್ರಿ ವರ್ಮ, ಜಬರ್ದಸ್ಥ್ ಎಮಾನ್ಯುಯೆಲ್, ಹರಿತ ಹರೀಷ್, ರಿತು ಚೌಧರಿ, ಡಿಮಾನ್ ಪವನ್, ಭರಣಿ ಶಂಕರ್, ರಾಮು ರಾಥೋಡ್ ಸೇರಿದಂತೆ ಮುಂತಾದವರು ಸ್ಪರ್ಧಿಗಳಾಗಿ ಭಾಗವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

11 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

11 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

11 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

12 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

13 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

13 hours ago