ಮನರಂಜನೆ

ಹಲವು ತಿಂಗಳುಗಳ ಬಳಿಕ ಕನ್ನಡ ಚಿತ್ರಕ್ಕೆ ಚಿಂದಿ ರೇಟಿಂಗ್ಸ್‌

ಹೊಸ ವರ್ಷಕ್ಕೆ ಕಾಲಿಟ್ಟ ಬಳಿಕ ಕನ್ನಡ ಚಿತ್ರರಂಗದಲ್ಲಿ ಮೊದಲ ದಿನವೇ ತೀರ್ಥರೂಪ ತಂದೆಯವರಿಗೆ ಎಂಬ ಚಿತ್ರ ಬಿಡುಗಡೆಯಾಗಿದೆ.

ಈ ಹಿಂದೆ 2023ರಲ್ಲಿ ಹೊಂದಿಸಿ ಬರೆಯಿರಿ ಎಂಬ ಚಿತ್ರದ ಮೂಲಕ ಕನ್ನಡ ಸಿನಿ ರಸಿಕರ ಮನಗೆದ್ದಿದ್ದ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಈ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದು, ನೈಜ ಕನ್ನಡ ಸಿನಿ ರಸಿಕರು ಚಿತ್ರ ಚಿತ್ರಮಂದಿರಗಳತ್ತ ಹೆಜ್ಜೆ ಹಾಕಿದ್ದಾರೆ.

ಈ ಚಿತ್ರ ಕಳೆದ ತಿಂಗಳು ಬಿಡುಗಡೆಯಾದ ಕನ್ನಡ ಚಿತ್ರಗಳ ಹಾಗೆ ರೇಟಿಂಗ್‌ ಮೇಲೆ ನಿರ್ಬಂಧ ಹೇರದೇ ಬಿಡುಗಡೆಗೊಂಡಿದ್ದು, ಬುಕ್‌ಮೈಶೋನಲ್ಲಿ ರೇಟಿಂಗ್‌ ವಿಚಾರವಾಗಿ ಹಲವು ತಿಂಗಳುಗಳ ಬಳಿ ಸ್ಪಷ್ಟ ಹಿಟ್‌ ಫಲಿತಾಂಶ ಕಂಡ ಚಿತ್ರವಾಗಿ ಹೊರಬಂದಿದೆ.

ಇಂದು ಬುಕ್‌ಮೈಶೋನಲ್ಲಿ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ರೇಟಿಂಗ್‌ ಪಡೆದುಕೊಂಡಿರುವ ಚಿತ್ರ 10ಕ್ಕೆ ಬರೋಬ್ಬರಿ 9.9 ರೇಟಿಂಗ್‌ ಗಿಟ್ಟಿಸಿಕೊಂಡಿದೆ.

ಇಷ್ಟು ಮಂದಿ ರೇಟ್‌ ಮಾಡಿದರೂ 9.9 ರೇಟಿಂಗ್‌ ಪಡೆದುಕೊಂಡಿರುವುದು ಪ್ರೇಕ್ಷಕರು ಚಿತ್ರಕ್ಕೆ ಕೊಟ್ಟ ಹಿಟ್‌ ಸರ್ಟಿಫಿಕೇಟ್‌ ಆಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ತಂಪಾದ ಕೊಡಗಿನಲ್ಲಿಯೂ ಹೆಚ್ಚುತ್ತಿದೆ ತಾಪ

ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…

35 mins ago

ಜೀವವೂ ಉಳಿಯಬೇಕು, ಜೀವನೋಪಾಯವೂ ನಡೆಯಬೇಕು

ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…

40 mins ago

ಅಕಾಲಿಕ ಮಳೆಯಿಂದ ಒಣ ಮರ ಬಿದ್ದು ದೇಗುಲ ಹಾನಿ

ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…

13 hours ago

ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ಸೂಕ್ತ ಕ್ರಮ: ಡಿಸಿಎಫ್‌ ಶ್ರೀಪತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…

14 hours ago

ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರ ಭರವಸೆ ಈಡೇರಿಕೆಗೆ ಆಗ್ರಹ: ತಹಶಿಲ್ದಾರ್‌ ಮುಖಾಂತರ ಸರ್ಕಾರಕ್ಕೆ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…

14 hours ago