ಮನರಂಜನೆ

‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ಉಪೇಂದ್ರ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ಉಪೇಂದ್ರ ಆಗಲೀ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಹೀಗಿರುವಾಗಲೇ, ‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ನಟಿಸುತ್ತಿರುವುದಾಗಿ ಉಪೇಂದ್ರ ಹೇಳಿಕೊಂಡಿದ್ದಾರೆ.

ರಜನಿಕಾಂತ್‍ ಅಭಿನಯದ ಚಿತ್ರಗಳಲ್ಲಿ ಇತ್ತೀಚೆಗೆ ಬೇರೆ ಭಾಷೆಯ ನಟರು ಆಗಾಗ ಕಾಣಿಸಿಕೊಳ್ಳುವುದು ಉಂಟು. ‘ಜೈಲರ್‍’ ಚಿತ್ರದಲ್ಲಿ ಶಿವರಾಜಕುಮಾರ್, ಜಾಕಿ ಶ್ರಾಫ್‍, ಮೋಹನ್‍ ಲಾಲ್‍ ಮುಂತಾದವರು ನಟಿಸಿದ್ದರು. ‘ಕೂಲಿ’ ಚಿತ್ರದಲ್ಲಿ ಮೊದಲು ನಾಗಾರ್ಜುನ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ನಾಗಾರ್ಜುನ ಆ ಪಾತ್ರವನ್ನು ತಿರಸ್ಕರಿಸಿದ ಸುದ್ದಿಯಾಗಿತ್ತು. ಈಗ ಅದೇ ಪಾತ್ರವನ್ನು ಉಪೇಂದ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಮಾತಮಾಡಿರುವ ಉಪೇಂದ್ರ, ರಜನಿಕಾಂತ್‍ ಜೊತೆಗೆ ನಟಿಸುವ ಅವಕಾಶ ಸಿಕ್ಕ ತಕ್ಷಣ ಒಪ್ಪಿಕೊಂಡಿದ್ದಾಗಿ ಹೇಳಿದ್ದಾರೆ. ‘ರಜನಿಕಾಂತ್ ಯೋಗಿಯಂತವರು. ಅಂಥವರ ಜೊತೆಗೆ ನಟಿಸುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ‘ಕೂಲಿ’ ಚಿತ್ರದಲ್ಲೊಂದು ಪ್ರಮುಖವಾದ ಪಾತ್ರ ಮಾಡುತ್ತಿದ್ದೇನೆ. ಅಕ್ಟೋಬರ್‍ನಿಂದ ನನ್ನ ಪಾತ್ರದ ಚಿತ್ರೀಕರನ ನಡೆಯಲಿದೆ. ಅಷ್ಟರಲ್ಲಿ ನನ್ನ ನಿರ್ದೇಶನದ ‘ಯುಐ’ ಚಿತ್ರವು ಬಿಡುಗಡೆ ಆಗಿರುತ್ತದೆ’ ಎಂದು ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ, ಉಪೇಂದ್ರ ಅವರು ‘ಸೂಪರ್‍’ ಚಿತ್ರವನ್ನು ನಿರ್ದೇಶಿಸಿದಾಗ, ಆ ಚಿತ್ರವನ್ನು ರಜನಿಕಾಂತ್‍ ನೋಡಿದ್ದರು. ಚೆನ್ನೈನಿಂದ ಚಿತ್ರ ನೋಡುವುದಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನುವುದು ವಿಶೇಷ. ಚಿತ್ರ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈಗ ರಜನಿಕಾಂತ್‍ ಅವರ ಜೊತೆ ಉಪೇಂದ್ರ ನಟಿಸುತ್ತಿರುವುದು ವಿಶೇಷ.

ಅಂದಹಾಗೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್‍ ಹಂತದಲ್ಲಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ. ಚಿತ್ರವು ಅಕ್ಟೋಬರ್‍ನಲ್ಲಿ ಬಿಡುಗಡೆ ಆಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಆದರೆ, ಸರಿಯಾ ದಿನಾಂಕ ಇನ್ನಷ್ಟೇ ಹೊರಬೀಳಬೇಕಿದೆ.

ಭೂಮಿಕಾ

Recent Posts

ಓದುಗರ ಪತ್ರ:  ಮತದಾರರ ಪಟ್ಟಿ ಮ್ಯಾಪಿಂಗ್; ಅಧಿಕಾರಿಗಳ ನಿರ್ಲಕ್ಷ್ಯ ಸರಿಯಲ್ಲ

ಡಿ.13, 14 ರಂದು ಮೈಸೂರಿನಲ್ಲಿ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವುದಾಗಿ ಪತ್ರಿಕೆಗಳಲ್ಲಿ ವರದಿಯಾಗಿತ್ತು. ಮತದಾರರ ಪಟ್ಟಿಯ ಪರಿಶೀಲನೆಗಾಗಿ…

3 mins ago

ಓದುಗರ ಪತ್ರ: ಫ್ರಾಂಚೈಸಿ ವಂಚನೆ; ಜಾಗೃತಿ ಅಗತ್ಯ

ಇತ್ತೀಚೆಗೆ ಫ್ರಾಂಚೈಸಿ ವ್ಯವಹಾರದ ಹೆಸರಿನಲ್ಲಿ ನಡೆಯುತ್ತಿರುವ ವಂಚನೆಗಳು ಹೆಚ್ಚುತ್ತಿವೆ. ನಕಲಿ ಕಂಪೆನಿಗಳು ದೊಡ್ಡ ಬ್ರಾಂಡ್‌ಗಳ ಹೆಸರನ್ನು ಬಳಸಿಕೊಂಡು ಜನರನ್ನು ಮೋಸ…

31 mins ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ವಿಮಾ ವಲಯದಲ್ಲಿ ಹೊಸ ಗಾಳಿ ಬೀಸುತ್ತಿದೆ

ಕೇಂದ್ರ ಸರ್ಕಾರ ಕಳೆದ ವಾರ ಅಧಿಕೃತ ಪ್ರಕಟಣೆಯನ್ನು ಹೊರಡಿಸಿ ಜೀವ ವಿಮೆಯೂ ಸೇರಿ ವಿಮಾ ರಂಗದಲ್ಲಿ ಇನ್ನು ಮುಂದೆ ಶೇ.೧೦೦ರಷ್ಟು…

39 mins ago

ಶೀಘ್ರದಲ್ಲಿಯೇ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ಕಿಮೋಥೆರಪಿ ಆರಂಭ

ಮಡಿಕೇರಿಯಲ್ಲಿಯೇ ಕ್ಯಾನ್ಸರ್ ರೋಗಿಗಳಿಗೆ ಪ್ರಾಥಮಿಕ ಹಂತದ ಚಿಕಿತ್ಸೆ; ವೈದ್ಯರ ನೇಮಕಕ್ಕೆ ಸರ್ಕಾರಕ್ಕೆ ಪತ್ರ ಮಡಿಕೇರಿ: ಕೊಡಗಿನಲ್ಲಿ ಡೇಕೇರ್ ಕಿಮೊಥೆರಪಿ ಕೇಂದ್ರ…

56 mins ago

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

1 hour ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

5 hours ago