ಮನರಂಜನೆ

‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ಉಪೇಂದ್ರ ನಟನೆ

ರಜನಿಕಾಂತ್‍ ಅಭಿನಯದ ‘ಕೂಲಿ’ ಚಿತ್ರದಲ್ಲಿ ನಟ-ನಿರ್ದೇಶಕ ಉಪೇಂದ್ರ ನಟಿಸುತ್ತಿದ್ದಾರೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಆದರೆ, ಚಿತ್ರತಂಡದವರಾಗಲೀ, ಉಪೇಂದ್ರ ಆಗಲೀ ಈ ಕುರಿತು ಯಾವುದೇ ಸ್ಪಷ್ಟನೆ ನೀಡಿರಲಿಲ್ಲ. ಹೀಗಿರುವಾಗಲೇ, ‘ಯುಐ’ ಬಿಡುಗಡೆಯ ನಂತರ ರಜನಿಕಾಂತ್ ಜೊತೆಗೆ ನಟಿಸುತ್ತಿರುವುದಾಗಿ ಉಪೇಂದ್ರ ಹೇಳಿಕೊಂಡಿದ್ದಾರೆ.

ರಜನಿಕಾಂತ್‍ ಅಭಿನಯದ ಚಿತ್ರಗಳಲ್ಲಿ ಇತ್ತೀಚೆಗೆ ಬೇರೆ ಭಾಷೆಯ ನಟರು ಆಗಾಗ ಕಾಣಿಸಿಕೊಳ್ಳುವುದು ಉಂಟು. ‘ಜೈಲರ್‍’ ಚಿತ್ರದಲ್ಲಿ ಶಿವರಾಜಕುಮಾರ್, ಜಾಕಿ ಶ್ರಾಫ್‍, ಮೋಹನ್‍ ಲಾಲ್‍ ಮುಂತಾದವರು ನಟಿಸಿದ್ದರು. ‘ಕೂಲಿ’ ಚಿತ್ರದಲ್ಲಿ ಮೊದಲು ನಾಗಾರ್ಜುನ ನಟಿಸುತ್ತಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ನಾಗಾರ್ಜುನ ಆ ಪಾತ್ರವನ್ನು ತಿರಸ್ಕರಿಸಿದ ಸುದ್ದಿಯಾಗಿತ್ತು. ಈಗ ಅದೇ ಪಾತ್ರವನ್ನು ಉಪೇಂದ್ರ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಕುರಿತು ಮಾತಮಾಡಿರುವ ಉಪೇಂದ್ರ, ರಜನಿಕಾಂತ್‍ ಜೊತೆಗೆ ನಟಿಸುವ ಅವಕಾಶ ಸಿಕ್ಕ ತಕ್ಷಣ ಒಪ್ಪಿಕೊಂಡಿದ್ದಾಗಿ ಹೇಳಿದ್ದಾರೆ. ‘ರಜನಿಕಾಂತ್ ಯೋಗಿಯಂತವರು. ಅಂಥವರ ಜೊತೆಗೆ ನಟಿಸುವುದಕ್ಕೆ ನನಗೆ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ. ‘ಕೂಲಿ’ ಚಿತ್ರದಲ್ಲೊಂದು ಪ್ರಮುಖವಾದ ಪಾತ್ರ ಮಾಡುತ್ತಿದ್ದೇನೆ. ಅಕ್ಟೋಬರ್‍ನಿಂದ ನನ್ನ ಪಾತ್ರದ ಚಿತ್ರೀಕರನ ನಡೆಯಲಿದೆ. ಅಷ್ಟರಲ್ಲಿ ನನ್ನ ನಿರ್ದೇಶನದ ‘ಯುಐ’ ಚಿತ್ರವು ಬಿಡುಗಡೆ ಆಗಿರುತ್ತದೆ’ ಎಂದು ಹೇಳಿದ್ದಾರೆ.

ಕೆಲವು ವರ್ಷಗಳ ಹಿಂದೆ, ಉಪೇಂದ್ರ ಅವರು ‘ಸೂಪರ್‍’ ಚಿತ್ರವನ್ನು ನಿರ್ದೇಶಿಸಿದಾಗ, ಆ ಚಿತ್ರವನ್ನು ರಜನಿಕಾಂತ್‍ ನೋಡಿದ್ದರು. ಚೆನ್ನೈನಿಂದ ಚಿತ್ರ ನೋಡುವುದಕ್ಕೆ ಅವರು ಬೆಂಗಳೂರಿಗೆ ಬಂದಿದ್ದರು ಎನ್ನುವುದು ವಿಶೇಷ. ಚಿತ್ರ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದರು. ಈಗ ರಜನಿಕಾಂತ್‍ ಅವರ ಜೊತೆ ಉಪೇಂದ್ರ ನಟಿಸುತ್ತಿರುವುದು ವಿಶೇಷ.

ಅಂದಹಾಗೆ, ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯುಐ’ ಚಿತ್ರವು ಸದ್ಯ ಪೋಸ್ಟ್ ಪ್ರೊಡಕ್ಷನ್‍ ಹಂತದಲ್ಲಿದ್ದು, ಸದ್ಯದಲ್ಲೇ ಮುಕ್ತಾಯವಾಗಲಿದೆ. ಚಿತ್ರವು ಅಕ್ಟೋಬರ್‍ನಲ್ಲಿ ಬಿಡುಗಡೆ ಆಗಲಿದೆ ಎಂದು ಈಗಾಗಲೇ ಘೋಷಿಸಲಾಗಿದೆ. ಆದರೆ, ಸರಿಯಾ ದಿನಾಂಕ ಇನ್ನಷ್ಟೇ ಹೊರಬೀಳಬೇಕಿದೆ.

ಭೂಮಿಕಾ

Recent Posts

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

18 seconds ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

7 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

17 hours ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

21 hours ago

ಮಲ್ಲಿಕಾರ್ಜುನ್‌ ಖರ್ಗೆ, ಎಂ.ನಾಗರಾಜ್‌ ಸಹಿತ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ

ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…

22 hours ago