ಮನರಂಜನೆ

ಮಗ ಆಯ್ತು, ಇದೀಗ ಅಪ್ಪನೂ ಹೀರೋ!; ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಚಾಲನೆ

ಕೆಲವು ವರ್ಷಗಳ ಹಿಂದೆ ಸಾ.ರಾ. ಗೋವಿಂದು, ಓಂ ಪ್ರಕಾಶ್‍ ರಾವ್, ಎಸ್‍. ಮಹೇಂದರ್‍, ಬಸಂತ್‍ ಕುಮಾರ್‍ ಪಾಟೀಲ್‍ ಮುಂತಾದ ಹಲವು ನಿರ್ಮಾಪಕರು, ನಿರ್ದೇಶಕರೆಲ್ಲಾ ಹೀರೋಗಳಾಗಿ ಜನರನ್ನು ರಂಜಿಸುವ ಪ್ರಯತ್ನವನ್ನು ಮಾಡಿದ್ದರು. ಈಗ ಆ ಸಾಲಿಗೆ ಹಿರಿಯ ನಿರ್ಮಾಪಕ ಮತ್ತು ವಿತರಕ ಶಿಲ್ಪಾ ಶ್ರೀನಿವಾಸ್ ಸಹ ಸೇರಿದ್ದಾರೆ.

‘ಉಪೇಂದ್ರ’, ‘ಪರ್ವ’ ಮುಂತಾದ ಬಿಗ್‍ ಬಜೆಟ್‍ ಚಿತ್ರಗಳನ್ನು ನಿರ್ಮಿಸುವುದರ ಜೊತೆಗೆ ವಿತರಕರಾಗಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಉಪಾಧ್ಯಕ್ಷರಾಗಿರುವ ಶಿಲ್ಪ ಶ್ರೀನಿವಾಸ್‍, ಇದೀಗ ಹೀರೋ ಆಗಿದ್ದಾರೆ. ಚಿತ್ರದ ಹೆಸರು ಸಹ ‘ಶಿಲ್ಪಾ ಶ್ರೀನಿವಾಸ್’ ಎನ್ನುವುದು ವಿಶೇಷ. ಇತ್ತೀಚೆಗೆ ಈ ಚಿತ್ರಕ್ಕೆ ಹೊಸಕೊಟೆಯ ಗಟ್ಟಿಗನಬ್ಬೆಯಲ್ಲಿ‌ ಚಾಲನೆ ದೊರೆಯಿತು. ನಟ-ಸಂಕಲನಕಾರ ನಾಗೇಂದ್ರ ಅರಸ್ ಅವರು ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು.

ವಿಶೇಷವೆಂದರೆ, ಕಳೆದ ವರ್ಷ ಶಿಲ್ಪಾ ಶ್ರೀನಿವಾಸ್‍ ಮಗ ಭರತ್‍, ‘ಮೆಜೆಸ್ಟಿಕ್‍ 2’ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಮಗನ ಚಿತ್ರ ಬಿಡುಗಡೆಯಾಗುವುದಕ್ಕೆ ಮೊದಲೇ ಅಪ್ಪನ ಚಿತ್ರ ಸಹ ಪ್ರಾರಂಭವಾಗಿದೆ.

ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ‘ಮುಗಿಲ ಮಲ್ಲಿಗೆ’ ಚಿತ್ರದ ನಿರ್ದೇಶಕ ಆರ್ .ಕೆ. ಗಾಂಧಿ, ‘ಶಿಲ್ಪಾ ಶ್ರೀನಿವಾಸ್’ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಲಿದ್ದಾರೆ. ಅನಿರುದ್ಧ ಶಾಸ್ತ್ರಿ ಸಂಗೀತ, ಪ್ರಮೋದ್ ಭಾರತೀಯ ಅವರ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಕಿಶೋರ್ ಕಾಸರಗೋಡು, ಸ್ವಾತಿ ಲಿಂಗರಾಜ್, ಪ್ರಿಯಾಂಕ, ಶೋಭರಾಜ್, ನಾಗೇಂದ್ರ ಅರಸ್ ಮುಂತಾದವರು ನಟಿಸುತ್ತಿದ್ದಾರೆ.

ಹೊಸಕೋಟೆ, ಚಿಕ್ಕಬಳ್ಳಾಪುರ ಅಲ್ಲದೆ ಬೆಂಗಳೂರಲ್ಲಿ ಒಟ್ಟು ಎರಡು ಹಂತಗಳಲ್ಲಿ ‘ಶಿಲ್ಪಾ ಶ್ರೀನಿವಾಸ್’ ಚಿತ್ರದ ಚಿತ್ರೀಕರಣ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

2 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

2 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

2 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

3 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

4 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago