ಮನರಂಜನೆ

ಮತ್ತೆ ನಿರ್ದೇಶಕರಾದ ಅನೀಶ್ ತೇಜೇಶ್ವರ್ ; ಹೊಸ ಚಿತ್ರಕ್ಕೆ ತಯಾರಿ

ಅನೀಶ್‍ ತೇಜೇಶ್ವರ್‍ ಅಭಿನಯದ ‘ಆರಾಮ್‍ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ.

ಹೀಗಿರುವಾಗಲೇ, ಅನೀಶ್ ‍ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಬರೀ ನಟನಷ್ಟೇ ಅಲ್ಲ, ಚಿತ್ರದ ನಿರ್ದೇಶನವನ್ನು ಸಹ ಮಾಡಿದ್ದಾರೆ. 2021ರಲ್ಲಿ ಬಿಡುಗಡೆಯಾದ ‘ರಾಮಾರ್ಜುನ’ ಎಂಬ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ, ಆ ಚಿತ್ರವನ್ನು ನಿರ್ಮಿಸಿ, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಈಗ ಹೊಸ ಚಿತ್ರದಲ್ಲಿ ಅವರು ನಟನೆ ಮತ್ತು ನಿರ್ದೇಶನ ಎಂಬ ಎರಡು ಜವಾಬ್ದಾರಿಗಳನ್ನು ಹೊತ್ತಿದ್ದಾರೆ.

ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅನೀಶ್‍, ‘’ಆರಾಮ್ ಅರವಿಂದಸ್ವಾಮಿ’ ನಂತರ, ನನ್ನ ಮುಂದಿನ ಹೆಜ್ಜೆಯನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ‘ರಾಮಾರ್ಜುನ’ ಚಿತ್ರದ ನಂತರ ನಾನು ಮತ್ತೆ ನಿರ್ದೇಶಿಸುತ್ತಿದ್ದು ಮತ್ತು ಈ ಬಾರಿ ಇನ್ನೂ ದೊಡ್ಡದಾಗಿ ಮತ್ತು ಉತ್ತಮವಾಗಿರಲಿದೆ. ನಿಮ್ಮ ನಿರೀಕ್ಷೆಗಳನ್ನು ತಲುಪಲು ನಮ್ಮ ತಂಡವು ಶ್ರಮಿಸುತ್ತಿದೆ. ನೀವು ನನ್ನನ್ನು ಮತ್ತೊಂದು ಭರವಸೆಯ ಮತ್ತು ವಿಶಿಷ್ಟ ಪಾತ್ರದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತಾ, ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ನಾವು ಏಕಕಾಲದಲ್ಲಿ ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ಮಾಡುತ್ತಿದ್ದೇವೆ. ಶೀರ್ಷಿಕೆ, ತಾರಾಗಣ ಮತ್ತು ಇನ್ನಿತರ ವಿವರಗಳಿಗಾಗಿ ನಿರೀಕ್ಷಿಸಿ. ಚಿತ್ರೀಕರಣ ಪ್ರಾರಂಭವಾಗಿದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ವಿವರಗಳು ಬರಲಿವೆ’ ಎಂದು ಅನೀಶ್‍ ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ನಲ್ಲಿ ಅನೀಶ್‍ ಒಂದು ಪೋಸ್ಟರ್‍ ಸಹ ಹಾಕಿದ್ದು, ಫ್ಲೈಓವರ್ ಮೇಲೆ ಯುವತಿಯೊಬ್ಬಳು ನಿಂತಿದ್ದು, ಅಲ್ಲಿಂದ ಕೆಳಗೆ ಜಿಗಿಯುವುದಕ್ಕೆ ತಯಾರಿ ನಡೆಸಿದ್ದಾಳೆ. ಕೆಳಗೆ ಒಬ್ಬ ಪೊಲೀಸ್ ಅಧಿಕಾರಿ ಗನ್‍ ಹಿಡಿದು ನಿಂತಿದ್ದಾನೆ. ಹಿನ್ನೆಲೆಯಲ್ಲಿ ಕ್ರಿಕೆಟ್‍ ಸ್ಟೇಡಿಯಂ ಇದ್ದು, ಇಂದು RCB vs CSK ಪಂದ್ಯವಿದೆ ಎಂಬ ಬರಹವಿದೆ. ಈ ಪೋಸ್ಟರ್‍ ಈಗಾಗಲೇ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಭಾವಪ್ರೀತ ಪ್ರೊಡಕ್ಷನ್ಸ್ ಸಂಸ್ಥೆಯಡಿ ಈ ಚಿತ್ರವನ್ನು ವಿಜಯ್ ಎಂ. ರೆಡ್ಡಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

3 hours ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

3 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

3 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

4 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

4 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

6 hours ago