ಮನರಂಜನೆ

ಮತ್ತೆ ನಿರ್ದೇಶಕರಾದ ಅನೀಶ್ ತೇಜೇಶ್ವರ್ ; ಹೊಸ ಚಿತ್ರಕ್ಕೆ ತಯಾರಿ

ಅನೀಶ್‍ ತೇಜೇಶ್ವರ್‍ ಅಭಿನಯದ ‘ಆರಾಮ್‍ ಅರವಿಂದಸ್ವಾಮಿ’ ಮತ್ತು ‘ಫಾರೆಸ್ಟ್’ ಚಿತ್ರಗಳು ಕೆಲವೇ ತಿಂಗಳುಗಳ ಅಂತರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಬಗ್ಗೆ ಪ್ರೇಕ್ಷಕರಿಂದ ಒಂದಿಷ್ಟು ಒಳ್ಳೆಯ ಮಾತುಗಳು ಕೇಳಿ ಬಂದಿವೆಯಾದರೂ, ಚಿತ್ರ ದೊಡ್ಡ ಯಶಸ್ಸು ಕಾಣಲಿಲ್ಲ.

ಹೀಗಿರುವಾಗಲೇ, ಅನೀಶ್ ‍ಹೊಸ ಚಿತ್ರವೊಂದನ್ನು ಘೋಷಿಸಿದ್ದಾರೆ. ಈ ಬಾರಿ ಅವರು ಬರೀ ನಟನಷ್ಟೇ ಅಲ್ಲ, ಚಿತ್ರದ ನಿರ್ದೇಶನವನ್ನು ಸಹ ಮಾಡಿದ್ದಾರೆ. 2021ರಲ್ಲಿ ಬಿಡುಗಡೆಯಾದ ‘ರಾಮಾರ್ಜುನ’ ಎಂಬ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ, ಆ ಚಿತ್ರವನ್ನು ನಿರ್ಮಿಸಿ, ಅದರಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಈಗ ಹೊಸ ಚಿತ್ರದಲ್ಲಿ ಅವರು ನಟನೆ ಮತ್ತು ನಿರ್ದೇಶನ ಎಂಬ ಎರಡು ಜವಾಬ್ದಾರಿಗಳನ್ನು ಹೊತ್ತಿದ್ದಾರೆ.

ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅನೀಶ್‍, ‘’ಆರಾಮ್ ಅರವಿಂದಸ್ವಾಮಿ’ ನಂತರ, ನನ್ನ ಮುಂದಿನ ಹೆಜ್ಜೆಯನ್ನು ಘೋಷಿಸಲು ನನಗೆ ತುಂಬಾ ಸಂತೋಷವಾಗಿದೆ. ‘ರಾಮಾರ್ಜುನ’ ಚಿತ್ರದ ನಂತರ ನಾನು ಮತ್ತೆ ನಿರ್ದೇಶಿಸುತ್ತಿದ್ದು ಮತ್ತು ಈ ಬಾರಿ ಇನ್ನೂ ದೊಡ್ಡದಾಗಿ ಮತ್ತು ಉತ್ತಮವಾಗಿರಲಿದೆ. ನಿಮ್ಮ ನಿರೀಕ್ಷೆಗಳನ್ನು ತಲುಪಲು ನಮ್ಮ ತಂಡವು ಶ್ರಮಿಸುತ್ತಿದೆ. ನೀವು ನನ್ನನ್ನು ಮತ್ತೊಂದು ಭರವಸೆಯ ಮತ್ತು ವಿಶಿಷ್ಟ ಪಾತ್ರದಲ್ಲಿ ನೋಡುತ್ತೀರಿ ಎಂದು ಭಾವಿಸುತ್ತಾ, ಹೆಚ್ಚಿನ ಪ್ರೇಕ್ಷಕರನ್ನು ತಲುಪಲು ನಾವು ಏಕಕಾಲದಲ್ಲಿ ಕನ್ನಡ ಮತ್ತು ತೆಲುಗಿನಲ್ಲಿ ಚಿತ್ರೀಕರಣ ಮಾಡುತ್ತಿದ್ದೇವೆ. ಶೀರ್ಷಿಕೆ, ತಾರಾಗಣ ಮತ್ತು ಇನ್ನಿತರ ವಿವರಗಳಿಗಾಗಿ ನಿರೀಕ್ಷಿಸಿ. ಚಿತ್ರೀಕರಣ ಪ್ರಾರಂಭವಾಗಿದೆ ಮತ್ತು ಶೀಘ್ರದಲ್ಲೇ ಹೆಚ್ಚಿನ ವಿವರಗಳು ಬರಲಿವೆ’ ಎಂದು ಅನೀಶ್‍ ಪೋಸ್ಟ್ ಮಾಡಿದ್ದಾರೆ.

ಈ ಪೋಸ್ಟ್ನಲ್ಲಿ ಅನೀಶ್‍ ಒಂದು ಪೋಸ್ಟರ್‍ ಸಹ ಹಾಕಿದ್ದು, ಫ್ಲೈಓವರ್ ಮೇಲೆ ಯುವತಿಯೊಬ್ಬಳು ನಿಂತಿದ್ದು, ಅಲ್ಲಿಂದ ಕೆಳಗೆ ಜಿಗಿಯುವುದಕ್ಕೆ ತಯಾರಿ ನಡೆಸಿದ್ದಾಳೆ. ಕೆಳಗೆ ಒಬ್ಬ ಪೊಲೀಸ್ ಅಧಿಕಾರಿ ಗನ್‍ ಹಿಡಿದು ನಿಂತಿದ್ದಾನೆ. ಹಿನ್ನೆಲೆಯಲ್ಲಿ ಕ್ರಿಕೆಟ್‍ ಸ್ಟೇಡಿಯಂ ಇದ್ದು, ಇಂದು RCB vs CSK ಪಂದ್ಯವಿದೆ ಎಂಬ ಬರಹವಿದೆ. ಈ ಪೋಸ್ಟರ್‍ ಈಗಾಗಲೇ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.

ಭಾವಪ್ರೀತ ಪ್ರೊಡಕ್ಷನ್ಸ್ ಸಂಸ್ಥೆಯಡಿ ಈ ಚಿತ್ರವನ್ನು ವಿಜಯ್ ಎಂ. ರೆಡ್ಡಿ ನಿರ್ಮಿಸುತ್ತಿದ್ದಾರೆ.

ಭೂಮಿಕಾ

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

36 seconds ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

56 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago