ಮನರಂಜನೆ

`ಯುದ್ಧಕಾಂಡ’ 100 ದಿನ ಓಡುತ್ತದೆ ಎಂಬ ನಂಬಿಕೆ ಇದೆ: ಅಜೇಯ್‍ ರಾವ್‍

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರದ ಗಳಿಕೆ ಕುಸಿದಿದೆ. ಮೊದಲ ಮೂರು ದಿನ ಒಳ್ಳೆಯ ಪ್ರದರ್ಶನ ಕಂಡ ಚಿತ್ರವು ಸೋಮವಾರದ ನಂತರ ಸ್ವಲ್ಪ ತಣ್ಣಗಾಗಿದೆ. ಆದರೆ, ಚಿತ್ರ ನೋಡಿದವರೆಲ್ಲರೂ ಒಳ್ಳೆಯ ಮಾತುಗಳನ್ನಾಡುತ್ತಿರುವುದು ಖುಷಿಯಾಗುತ್ತಿದೆ ಎಂದು ಅಜೇಯ್‍ ಹೇಳಿಕೊಂಡಿದ್ದಾರೆ.

‘ಯುದ್ಧಕಾಂಡ’ ಚಿತ್ರದ ಕುರಿತು ಮಾತನಾಡಲು ಅಜೇಯ್‍ ತಮ್ಮ ತಂಡದವರೊಂದಿಗೆ ಮಾಧ್ಯಮದವರೆದುರು ಬಂದಿದ್ದರು. ಈ ಸಂದರ್ಭದಲ್ಲಿ ನಿರ್ದೇಶಕ ಪವನ್‍, ಸಂಕಲನಕಾರ ಶ್ರೀ, ಅರ್ಚನಾ ಜೋಯಿಸ್‍, ಪ್ರಕಾಶ್‍ ಬೆಳವಾಡಿ ಮುಂತಾದವರು ಹಾಜರಿದ್ದರು.

ಮೊದಲು ಮಾಧ್ಯಮದವರಿಗೆ ಧನ್ಯವಾದ ತಿಳಿಸಿದ ಅಜೇಯ್‍, ‘ನಮ್ಮ ಚಿತ್ರವನ್ನು ಈವರೆಗೂ ನೋಡಿರುವ ಒಬ್ಬ ಪ್ರೇಕ್ಷಕರಿಂದ ಸಹ ನಮ್ಮ ಚಿತ್ರದ ಬಗ್ಗೆ ನೆಗೆಟಿವ್ ಮಾತು ಬಂದಿಲ್ಲ ಎಲ್ಲರು 100% ಮೆಚ್ಚಿಕೊಂಡಿದ್ದಾರೆ. ಪ್ರೇಕ್ಷಕರು ನನ್ನ ಚಿತ್ರದ ಬಗ್ಗೆ ಆಡಿರುವ ಪಾಸಿಟಿವ್ ಮಾತುಗಳು ನಮಗೆ ಇನ್ನಷ್ಟು ಶಕ್ತಿ ತುಂಬಿದೆ. ಈ ಚಿತ್ರ ಜನರ ಮನಸ್ಸಿಗೆ ಬಹಳ ಹತ್ತಿರವಾಗಿದೆ ಅಂತ ಹೇಳಬಹುದು. ಅಜೇಯ್ ರಾವ್ ಇಂತಹ ಚಿತ್ರ ಮಾಡಿದ್ದ ಅಂತ ನಾನು ಹೋದ ಮೇಲು ನೆನಪಿಸಿಕೊಳ್ಳುವ ಚಿತ್ರ ‘ಯುದ್ದಕಾಂಡವಾಗಿದೆ’ ಎಂದರು.

ಚಿತ್ರವನ್ನು ಜನ 100 ದಿನಗಳ ತನಕ ತೆಗೆದುಕೊಂಡು ಹೋಗುತ್ತಾರೆ ಎಂಬ ನಂಬಿಕೆ ವ್ಯಕ್ತಪಡಿಸಿದ ಅಜೇಯ್‍, ‘ಚಿತ್ರ ನೋಡಿದವರು ಅವರ ಸ್ನೇಹಿತರಿಗೂ ಈ ಸಿನಿಮಾ ನೋಡುವಂತೆ ಹೇಳುತ್ತಿದ್ದಾರೆ. ಈ ಚಿತ್ರವನ್ನು ಮೊದಲು ನೋಡಿ ಬಿಡುಗಡೆಗೆ ಸಹಕರಿಸಿ ನನ್ನ ಜೊತೆಯಾಗಿ ನಿಂತವರು ನಟ ಯಶ್. ಅವರನ್ನು ಇಂತಹ ಸಂದರ್ಭದಲ್ಲಿ ನಾನು ಮರೆಯುವಂತಿಲ್ಲ. ‘ಯುದ್ದಕಾಂಡ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಜೊತೆಗೆ ಚಿತ್ರದ ಮೊದಲ ಟಿಕೇಟ್‍ಗೆ ಹಣ ನೀಡಿ ರವಿಚಂದ್ರನ್ ಸರ್ ನನಗೆ ಹಾರೈಸಿ ಮತ್ತು ಸದ್ಯದಲ್ಲೇ ಕುಟುಂಬ ಸಮೇತ ಚಿತ್ರ ನೋಡುವುದಾಗಿ ಹೇಳಿದ್ದಾರೆ. ರಕ್ಷಿತಾ ಹಾಗೂ ಪ್ರೇಮ್ ಅವರು ಸಹ ಕರೆ ಮಾಡಿ ವಿಚಾರಿಸಿದ್ದಾರೆ. ‘ನೆನಪಿರಲಿ’ ಪ್ರೇಮ್, ಓಂಪ್ರಕಾಶ್ ರಾವ್ ಮುಂತಾದವರು ಚಿತ್ರ ನೋಡಿ ವಿಡಿಯೋ ಸಂದೇಶದ ಮೂಲಕ ಹಾರೈಸಿದ್ದಾರೆ. ಇವರೆಲ್ಲರಿಗೂ ಹಾಗೂ ಸದಾ ತನ್ನ ಜೊತೆಗಿರುವ ನನ್ನ ತಂಡಕ್ಕೂ ವಿಶೇಷ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದರು ಅಜೇಯ್.

ನಿರ್ದೇಶಕ ಪವನ್‍ ಅವರಿಗೆ ಬಿಡುಗಡೆಗೂ ‌ಮುಂಚೆ ನನಗೆ ಎಲ್ಲಾ ಆಲ್ ದಿ ಬೆಸ್ಟ್ ಹೇಳುತ್ತಿದ್ದರಂತೆ. ಈಗ ಅಭಿನಂದನೆಗಳನ್ನು ಹೇಳುತ್ತಿದ್ದಾರಂತೆ. ಇದಕ್ಕಿಂತ ನನಗೆ ಇನೇನು ಬೇಕು ಎಂದ ನಿರ್ದೇಶಕ ಪವನ್ ಭಟ್, ಚಿತ್ರದ ಯಶಸ್ಸಿಗೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳಿದರು.

ಪ್ರಕಾಶ್‍ ಬೆಳವಾಡಿ ಅವರ ಪತ್ನಿ ಸಿನಿಮಾ ನೋಡಿ ಭಾವುಕರಾಗಿ ಚಿತ್ರಮಂದಿರದಿಂದಲೇ ಕರೆ ಮಾಡಿದರಂತೆ. ‘ಮನೆಗೆ ಬಂದ ಮೇಲೆ ನಿಮ್ಮ ಪಾತ್ರ ತುಂಬಾ ಚೆನ್ನಾಗಿದೆ. ಮುಂದೆ ಈ ತರಹದ ಪಾತ್ರಗಳನ್ನು ಮಾತ್ರ ಒಪ್ಪಿಕೊಳ್ಳಿ ಎಂದು ಸಲಹೆ ಕೂಡ ನೀಡಿದರು. ಒಂದೊಳ್ಳೆಯ ಚಿತ್ರ ಮಾಡಿ ನಿರ್ಮಾಪಕರು ಹಾಗೂ ನಿರ್ದೇಶಕರು ಗೆದಿದ್ದಾರೆ. ಚಿತ್ರದ ಗೆಲುವಿಗೆ ಎಲ್ಲಕ್ಕಿಂತ ಬಾಯ್ಮಾತಿನ ಪ್ರಚಾರ ಬಹಳ ಮುಖ್ಯ. ಹಾಗಾಗಿ, ಚಿತ್ರ ನೋಡಿದವರು ಹೆಚ್ಚಿನ ಜನರಿಗೆ ಈ ಚಿತ್ರದ ಬಗ್ಗೆ ಹೇಳಿ’ ಎಂದರು ಪ್ರಕಾಶ್ ಬೆಳವಾಡಿ.

‘ಯುದ್ಧಕಾಂಡ’ ಚಿತ್ರದಲ್ಲಿ ಅಜೇಯ್‍ ರಾವ್‍, ಸುಪ್ರಿತಾ ಸತ್ಯನಾರಾಯಣ್‍, ಅರ್ಚನಾ ಜೋಯಿಸ್‍, ಪ್ರಕಾಶ್‍ ಬೆಳವಾಡಿ, ಟಿ.ಎಸ್. ನಾಗಾಭರಣ ಮುಂತಾದವರು ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

1 hour ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

1 hour ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

1 hour ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

1 hour ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

1 hour ago

ಮಂಡ್ಯಕ್ಕೆ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ ಘೋಷಣೆ

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು…

2 hours ago