ಮನರಂಜನೆ

ಇದುವರೆಗೂ ಮಾಡದ ಪಾತ್ರವೊಂದರ ಜೊತೆಗೆ ಬಂದ ಅಜೇಯ್‍ ರಾವ್‍

ಅಜೇಯ್‍ ರಾವ್ ಎಂದರೆ ಲವ್ವರ್ ಬಾಯ್‍ ಪಾತ್ರಗಳು ಎಂದು ಬ್ರಾಂಡ್‍ ಆಗಿ ಹೋಗಿತ್ತು. ಅದರಿಂದ ಆಚೆ ಬರುವುದಕ್ಕೆ ಅಜೇಯ್‍ ಸಹ ಪ್ರಯತ್ನ ಮಾಡುತ್ತಲೇ ಇದ್ದಾರೆ. ಮೊದಲ ಹಂತವಾಗಿ ಈಗಾಗಲೇ ‘ಯುದ್ಧಕಾಂಡ’ ಬಿಡುಗಡೆಯಾಗಿದೆ. ಈಗ ಅವರು ಮೊದಲ ಬಾರಿಗೆ ಸೈಕ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಅಜೇಯ್‍ ಸದ್ದಿಲ್ಲದೆ ‘ರಾಧೇಯ’ ಎಂಬ ಹೊಸ ಚಿತ್ರದ ಮೂಲಕ ವಾಪಸ್ಸಾಗಿದ್ದಾರೆ. ಈ ಚಿತ್ರವು ನವೆಂಬರ್ 21ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟೀಸರ್‍ ಬಿಡುಗಡೆಯಾಗಿದೆ. ಒಂದಷ್ಟು ವರ್ಷಗಳಿಂದ ಕೆಲವು ನಿರ್ದೇಶಕರ ಜೊತೆಗೆ ಕೆಲಸ ಮಾಡಿ ಅನುಭವ ಪಡೆದಿರುವ ವೇದಗುರು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಜೊತೆಗೆ ಕೀರ್ತಿ ಚಾಹ್ನಾ ಸಿನಿಮಾ ಕಾರ್ಖಾನೆ ಮೂಲಕ ನಿರ್ಮಾಣ ಸಹ ಮಾಡಿದ್ದಾರೆ.

‘ರಾಧೇಯ’ ತಮ್ಮ ವೃತ್ತಿಬದುಕಿನಲ್ಲಿ ವಿಭಿನ್ನವಾದ ಚಿತ್ರ ಎನ್ನುವ ಅಜೇಯ್‍, ‘ಈ ತರಹದ ಪಾತ್ರ ನಾನು ಮಾಡಿರಲಿಲ್ಲ. ನಾನು ಒಂದೇ ತರಹದ ಪಾತ್ರಗಳಿಗೆ ಸೀಮಿತವಾಗಿದ್ದೆ. ಇವನಲ್ಲಿ ಪ್ರತಿಭೆಯಿದೆ, ಇವನಿಂದ ಈ ಪಾತ್ರ ಮಾಡಿಸಬೇಕು ಎಂದು ವೇದಗುರು ಬಂದಿದ್ದರು. ಈ ಚಿತ್ರಕ್ಕೆ ಅವರೇ ಹೀರೋ. ನನ್ನನ್ನು ಅರ್ಥ ಮಾಡಿಕೊಂಡು ಚಿತ್ರ ನಿರ್ಮಿಸಿ-ನಿರ್ದೇಶಿಸಿದ್ದಾರೆ. ನನ್ನ ಮೇಲೆ ನಂಬಿಕೆ ಇಟ್ಟು ಈ ಚಿತ್ರ ಮಾಡಿದ್ದಾರೆ’ ಎಂದರು.

ಇದನ್ನು ಓದಿ: ಮೊದಲು ಕನ್ನಡ, ನಂತರ ಬೇರೆ ಭಾಷೆಗಳಲ್ಲಿ ಬರಲಿದ್ದಾನೆ ‘ಬ್ರ್ಯಾಟ್‍’

‘ರಾಧೇಯ’ ಎಂದರೆ ಕುಂತಿ ಪುತ್ರ ಕರ್ಣ ಎಂದರ್ಥ. ಹಾಗಂತ ಈ ಚಿತ್ರಕ್ಕೂ ನಾಯಕನ ಪಾತ್ರಕ್ಕೂ ಯಾವುದೇ ಸಂಬಂಧವಿಲ್ಲವಂತೆ. ಆದರೆ, ಕರ್ಣನ ತ್ಯಾಗ ಬಹಳ ಪ್ರಸ್ತುತವಾಗಿದೆ ಎನ್ನುವ ಅಜೇಯ್‍, ‘ಇಲ್ಲಿ ಹೀರೋ ತನ್ನ ಮೌಲ್ಯಗಳನ್ನು ಸಮಾಜಕ್ಕೆ ಹೇಗೆ ಬಳಸಿಕೊಳ್ಳುತ್ತನೆ, ಅದು ಹೇಗೆ ಅವನ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತದೆ ಎಂಬುದು ಕಥೆ. ಅವನು ಕ್ರಿಮಿನಲ್‍ ಆಗಿ ಜೈಲಿನಲ್ಲಿ ಕುಳಿತು ತನ್ನ ಅನುಭವಗಳನ್ನು ಹೇಳುವ ಸಿನಿಮಾ. ಸಮಾಜಕ್ಕೆ ನಾವೂ ಏನಾದರೂ ಮಾಡಬೇಕು ಎಂದು ಸ್ಫೂರ್ತಿ ತುಂಬುವ ಸಿನಿಮಾ. ನಾನು ಸೈಕ್‍ ಆಗಿ ಅಭಿನಯಿಸಿದ್ದೇನೆ. ಅದಕ್ಕೆ ಕಾರಣವೇನು ಎಂದು ಚಿತ್ರದಲ್ಲಿ ಗೊತ್ತಾಗುತ್ತದೆ’ ಎಂದರು.

‘ರಾಧೇಯ’ ಚಿತ್ರದಲ್ಲಿ ಅಜೇಯ್‍ಗೆ ನಾಯಕಿಯಾಗಿ ನಟಿಸಿದ್ದು, ಮಿಕ್ಕಂತೆ ಧನ್ಯಾ ಬಾಲಕೃಷ್ಣ, ಗಿರಿ ಶಿವಣ್ಣ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ವಿಯಾನ್ (ಸ್ಯಾಂಡಿ) ಅವರ ಸಂಗೀತ ಸಂಯೋಜನೆ, ರಮ್ಮಿ ಅವರ ಛಾಯಾಗ್ರಹಣವಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

8 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

8 hours ago