ಮನರಂಜನೆ

ಪ್ರಶಾಂತ್‍ ನೀಲ್‍ ಜೊತೆಗೆ ಅಜಿತ್ ಎರಡು ಚಿತ್ರ: ‘ಕೆಜಿಎಫ್‍ 3’ನಲ್ಲಿ ನಟಿಸುವ ಸಾಧ್ಯತೆ

ಪ್ರಶಾಂತ್ ನೀಲ್‍ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್‍ ಎನ್‍.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್‍ ಶುರು ಮಾಡುತ್ತಾರೆ ಎಂಬ ಮಾತೂ ಇದೆ. ಹೀಗಿರುವಾಗಲೇ, ಕಾಲಿವುಡ್‍ ಅಂಗಳದಿಂದ ಒಂದು ಹೊಸ ಸುದ್ದಿ ಬಂದಿದೆ.

ಇದುವರೆಗೂ ಪ್ರಶಾಂತ್‍ ನೀಲ್‍ ಹೆಸರು ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಆದರೆ, ಇದೀಗ ತಮಿಳು ಚಿತ್ರರಂಗದಲ್ಲೂ ಪ್ರಶಾಂತ್‍ ಹೆಸರು ಜೋರಾಗಿಯೇ ಕೇಳಿಬಂದಿದೆ. ಮೂಲಗಳ ಪ್ರಕಾರ, ನಟ ಅಜಿತ್‍ ಅಭಿನಯದಲ್ಲಿ ಪ್ರಶಾಂತ್ ಎರಡು ಚಿತ್ರಗಳನ್ನು ನಿರ್ದೇಶಿಸುತ್ತಾರಂತೆ. ಅಷ್ಟೇ ಅಲ್ಲ, ‘ಕೆಜಿಎಫ್‍ 3’ ಚಿತ್ರದಲ್ಲೂ ಅಜಿತ್‍ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೌದು, ಇತ್ತೀಚೆಗೆ ಚೆನ್ನೈನಲ್ಲಿ ಪ್ರಶಾಂತ್‍ ನೀಲ್‍ ಮತ್ತು ಅಜಿತ್‍ ಭೇಟಿಯಾಗಿದೆ. ಈ ಭೇಟಿಯಲ್ಲಿ ಅಜಿತ್‍ ಜೊತೆಗೆ ಪ್ರಶಾಂತ್‍ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರಂತೆ. ಅಜಿತ್‍ಗಾಗಿಯೇ ಪ್ರಶಾಂತ್‍ ಒಂದು ಕಥೆ ಮಾಡಿಟ್ಟುಕೊಂಡಿದ್ದಾರಂತೆ. ಇದರ ಜೊತೆಗೆ ಯಶ್‍ ಅಭಿನಯದ ‘ಕೆಜಿಎಫ್‍ 3’ ಚಿತ್ರದಲ್ಲೂ ಒಂದು ಪಾತ್ರ ಮಾಡುವುದಕ್ಕೆ ಅಜಿತ್‍ಗೆ ಪ್ರಶಾಂತ್ ‍ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಚಿತ್ರಗಳನ್ನು ಹೊಂಬಾಳೆ ಫಿಲಂಸ್‍ ನಿರ್ಮಾಣ ಮಾಡುತ್ತಿದೆಯಂತೆ.

ಈ ಸುದ್ದಿಗಳಲ್ಲಿ ಎಷ್ಟು ನಿಜ ಅಥವಾ ಸುಳ್ಳಿದೆ ಎಂದು ಈಗಲೇ ಹೇಳುವುದು ಕಷ್ಟ. ಏಕೆಂದರೆ, ಈ ಬಗ್ಗೆ ಪ್ರಶಾಂತ್‍ ಆಗಲೀ, ಅಜಿತ್‍ ಆಗಲೀ ಎಲ್ಲೂ ಮಾತನಾಡಿಲ್ಲ. ಒಂದು ಪಕ್ಷ ಈ ಚಿತ್ರಗಳು ಸಾಧ್ಯವಾದರೂ ಅದಕ್ಕೆ ಸಾಕಷ್ಟು ಸಮಯವಿದೆ. ಏಕೆಂದರೆ, ಪ್ರಶಾಂತ್‍ ಕೈಯಲ್ಲಿ ಸಾಕಷ್ಟು ಕೆಲಸವಿದ್ದು, ಮುಂದಿನ ತಿಂಗಳಿನಿಂದ ಅವರು ಹೈದರಾಬಾದ್‍ನಲ್ಲಿ ‘ಸಲಾರ್ 2’ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಸದ್ಯ, ‘ವಿದಾ ಮುಯರ್ಚಿ’ ಎಂಬ ಚಿತ್ರದಲ್ಲಿ ಅಜಿತ್‍ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಅಕ್ಟೋಬರ್‍ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಮೈಸೂರು | ಅನಧಿಕೃತ ಪ್ಲೇಕ್ಸ್, ಬ್ಯಾನರ್ ತೆರವುಗೊಳಿಸಿ ; ಜಿಲ್ಲಾಧಿಕಾರಿ ಆದೇಶ

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ…

40 seconds ago

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ…

2 hours ago

ಮಡಿಕೇರಿ | ಟ್ರಾಕ್ಟರ್ ಮಗುಚಿ ಕಾರ್ಮಿಕ ಸಾವು

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ…

2 hours ago

ಬುದನೂರು ಉತ್ಸವ | ಹೆಲಿಕಾಪ್ಟರ್‌ ಜಾಯ್‌ ರೈಡ್‌ಗೆ ಚಾಲನೆ

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ…

3 hours ago

ಟಾಕ್ಸಿಕ್ ಟೀಸರ್ ಬಿಡುಗಡೆ : ಡಬಲ್‌ ಲುಕ್‌ನಲ್ಲಿ ಅಬ್ಬರಿಸಿದ ರಾಕಿಂಗ್‌ ಸ್ಟಾರ್ ರಾಯ‌

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್…

3 hours ago

ಓದುಗರ ಪತ್ರ: ಶಾಲಾ ದಾಖಲಾತಿ ವಯೋಮಿತಿ ಸಮಸ್ಯೆ ನಿವಾರಿಸಿ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.…

7 hours ago