ಪ್ರಶಾಂತ್ ನೀಲ್ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್ ಎನ್.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್ ಶುರು ಮಾಡುತ್ತಾರೆ ಎಂಬ ಮಾತೂ ಇದೆ. ಹೀಗಿರುವಾಗಲೇ, ಕಾಲಿವುಡ್ ಅಂಗಳದಿಂದ ಒಂದು ಹೊಸ ಸುದ್ದಿ ಬಂದಿದೆ.
ಇದುವರೆಗೂ ಪ್ರಶಾಂತ್ ನೀಲ್ ಹೆಸರು ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಆದರೆ, ಇದೀಗ ತಮಿಳು ಚಿತ್ರರಂಗದಲ್ಲೂ ಪ್ರಶಾಂತ್ ಹೆಸರು ಜೋರಾಗಿಯೇ ಕೇಳಿಬಂದಿದೆ. ಮೂಲಗಳ ಪ್ರಕಾರ, ನಟ ಅಜಿತ್ ಅಭಿನಯದಲ್ಲಿ ಪ್ರಶಾಂತ್ ಎರಡು ಚಿತ್ರಗಳನ್ನು ನಿರ್ದೇಶಿಸುತ್ತಾರಂತೆ. ಅಷ್ಟೇ ಅಲ್ಲ, ‘ಕೆಜಿಎಫ್ 3’ ಚಿತ್ರದಲ್ಲೂ ಅಜಿತ್ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಹೌದು, ಇತ್ತೀಚೆಗೆ ಚೆನ್ನೈನಲ್ಲಿ ಪ್ರಶಾಂತ್ ನೀಲ್ ಮತ್ತು ಅಜಿತ್ ಭೇಟಿಯಾಗಿದೆ. ಈ ಭೇಟಿಯಲ್ಲಿ ಅಜಿತ್ ಜೊತೆಗೆ ಪ್ರಶಾಂತ್ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರಂತೆ. ಅಜಿತ್ಗಾಗಿಯೇ ಪ್ರಶಾಂತ್ ಒಂದು ಕಥೆ ಮಾಡಿಟ್ಟುಕೊಂಡಿದ್ದಾರಂತೆ. ಇದರ ಜೊತೆಗೆ ಯಶ್ ಅಭಿನಯದ ‘ಕೆಜಿಎಫ್ 3’ ಚಿತ್ರದಲ್ಲೂ ಒಂದು ಪಾತ್ರ ಮಾಡುವುದಕ್ಕೆ ಅಜಿತ್ಗೆ ಪ್ರಶಾಂತ್ ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಚಿತ್ರಗಳನ್ನು ಹೊಂಬಾಳೆ ಫಿಲಂಸ್ ನಿರ್ಮಾಣ ಮಾಡುತ್ತಿದೆಯಂತೆ.
ಈ ಸುದ್ದಿಗಳಲ್ಲಿ ಎಷ್ಟು ನಿಜ ಅಥವಾ ಸುಳ್ಳಿದೆ ಎಂದು ಈಗಲೇ ಹೇಳುವುದು ಕಷ್ಟ. ಏಕೆಂದರೆ, ಈ ಬಗ್ಗೆ ಪ್ರಶಾಂತ್ ಆಗಲೀ, ಅಜಿತ್ ಆಗಲೀ ಎಲ್ಲೂ ಮಾತನಾಡಿಲ್ಲ. ಒಂದು ಪಕ್ಷ ಈ ಚಿತ್ರಗಳು ಸಾಧ್ಯವಾದರೂ ಅದಕ್ಕೆ ಸಾಕಷ್ಟು ಸಮಯವಿದೆ. ಏಕೆಂದರೆ, ಪ್ರಶಾಂತ್ ಕೈಯಲ್ಲಿ ಸಾಕಷ್ಟು ಕೆಲಸವಿದ್ದು, ಮುಂದಿನ ತಿಂಗಳಿನಿಂದ ಅವರು ಹೈದರಾಬಾದ್ನಲ್ಲಿ ‘ಸಲಾರ್ 2’ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.
ಸದ್ಯ, ‘ವಿದಾ ಮುಯರ್ಚಿ’ ಎಂಬ ಚಿತ್ರದಲ್ಲಿ ಅಜಿತ್ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಅಕ್ಟೋಬರ್ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…