ಮನರಂಜನೆ

ಪ್ರಶಾಂತ್‍ ನೀಲ್‍ ಜೊತೆಗೆ ಅಜಿತ್ ಎರಡು ಚಿತ್ರ: ‘ಕೆಜಿಎಫ್‍ 3’ನಲ್ಲಿ ನಟಿಸುವ ಸಾಧ್ಯತೆ

ಪ್ರಶಾಂತ್ ನೀಲ್‍ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್‍ ಎನ್‍.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್‍ ಶುರು ಮಾಡುತ್ತಾರೆ ಎಂಬ ಮಾತೂ ಇದೆ. ಹೀಗಿರುವಾಗಲೇ, ಕಾಲಿವುಡ್‍ ಅಂಗಳದಿಂದ ಒಂದು ಹೊಸ ಸುದ್ದಿ ಬಂದಿದೆ.

ಇದುವರೆಗೂ ಪ್ರಶಾಂತ್‍ ನೀಲ್‍ ಹೆಸರು ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಆದರೆ, ಇದೀಗ ತಮಿಳು ಚಿತ್ರರಂಗದಲ್ಲೂ ಪ್ರಶಾಂತ್‍ ಹೆಸರು ಜೋರಾಗಿಯೇ ಕೇಳಿಬಂದಿದೆ. ಮೂಲಗಳ ಪ್ರಕಾರ, ನಟ ಅಜಿತ್‍ ಅಭಿನಯದಲ್ಲಿ ಪ್ರಶಾಂತ್ ಎರಡು ಚಿತ್ರಗಳನ್ನು ನಿರ್ದೇಶಿಸುತ್ತಾರಂತೆ. ಅಷ್ಟೇ ಅಲ್ಲ, ‘ಕೆಜಿಎಫ್‍ 3’ ಚಿತ್ರದಲ್ಲೂ ಅಜಿತ್‍ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೌದು, ಇತ್ತೀಚೆಗೆ ಚೆನ್ನೈನಲ್ಲಿ ಪ್ರಶಾಂತ್‍ ನೀಲ್‍ ಮತ್ತು ಅಜಿತ್‍ ಭೇಟಿಯಾಗಿದೆ. ಈ ಭೇಟಿಯಲ್ಲಿ ಅಜಿತ್‍ ಜೊತೆಗೆ ಪ್ರಶಾಂತ್‍ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರಂತೆ. ಅಜಿತ್‍ಗಾಗಿಯೇ ಪ್ರಶಾಂತ್‍ ಒಂದು ಕಥೆ ಮಾಡಿಟ್ಟುಕೊಂಡಿದ್ದಾರಂತೆ. ಇದರ ಜೊತೆಗೆ ಯಶ್‍ ಅಭಿನಯದ ‘ಕೆಜಿಎಫ್‍ 3’ ಚಿತ್ರದಲ್ಲೂ ಒಂದು ಪಾತ್ರ ಮಾಡುವುದಕ್ಕೆ ಅಜಿತ್‍ಗೆ ಪ್ರಶಾಂತ್ ‍ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಚಿತ್ರಗಳನ್ನು ಹೊಂಬಾಳೆ ಫಿಲಂಸ್‍ ನಿರ್ಮಾಣ ಮಾಡುತ್ತಿದೆಯಂತೆ.

ಈ ಸುದ್ದಿಗಳಲ್ಲಿ ಎಷ್ಟು ನಿಜ ಅಥವಾ ಸುಳ್ಳಿದೆ ಎಂದು ಈಗಲೇ ಹೇಳುವುದು ಕಷ್ಟ. ಏಕೆಂದರೆ, ಈ ಬಗ್ಗೆ ಪ್ರಶಾಂತ್‍ ಆಗಲೀ, ಅಜಿತ್‍ ಆಗಲೀ ಎಲ್ಲೂ ಮಾತನಾಡಿಲ್ಲ. ಒಂದು ಪಕ್ಷ ಈ ಚಿತ್ರಗಳು ಸಾಧ್ಯವಾದರೂ ಅದಕ್ಕೆ ಸಾಕಷ್ಟು ಸಮಯವಿದೆ. ಏಕೆಂದರೆ, ಪ್ರಶಾಂತ್‍ ಕೈಯಲ್ಲಿ ಸಾಕಷ್ಟು ಕೆಲಸವಿದ್ದು, ಮುಂದಿನ ತಿಂಗಳಿನಿಂದ ಅವರು ಹೈದರಾಬಾದ್‍ನಲ್ಲಿ ‘ಸಲಾರ್ 2’ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಸದ್ಯ, ‘ವಿದಾ ಮುಯರ್ಚಿ’ ಎಂಬ ಚಿತ್ರದಲ್ಲಿ ಅಜಿತ್‍ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಅಕ್ಟೋಬರ್‍ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

6 mins ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

29 mins ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

60 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

1 hour ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

2 hours ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

3 hours ago