ಮನರಂಜನೆ

ಪ್ರಶಾಂತ್‍ ನೀಲ್‍ ಜೊತೆಗೆ ಅಜಿತ್ ಎರಡು ಚಿತ್ರ: ‘ಕೆಜಿಎಫ್‍ 3’ನಲ್ಲಿ ನಟಿಸುವ ಸಾಧ್ಯತೆ

ಪ್ರಶಾಂತ್ ನೀಲ್‍ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್‍ ಎನ್‍.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್‍ ಶುರು ಮಾಡುತ್ತಾರೆ ಎಂಬ ಮಾತೂ ಇದೆ. ಹೀಗಿರುವಾಗಲೇ, ಕಾಲಿವುಡ್‍ ಅಂಗಳದಿಂದ ಒಂದು ಹೊಸ ಸುದ್ದಿ ಬಂದಿದೆ.

ಇದುವರೆಗೂ ಪ್ರಶಾಂತ್‍ ನೀಲ್‍ ಹೆಸರು ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಆದರೆ, ಇದೀಗ ತಮಿಳು ಚಿತ್ರರಂಗದಲ್ಲೂ ಪ್ರಶಾಂತ್‍ ಹೆಸರು ಜೋರಾಗಿಯೇ ಕೇಳಿಬಂದಿದೆ. ಮೂಲಗಳ ಪ್ರಕಾರ, ನಟ ಅಜಿತ್‍ ಅಭಿನಯದಲ್ಲಿ ಪ್ರಶಾಂತ್ ಎರಡು ಚಿತ್ರಗಳನ್ನು ನಿರ್ದೇಶಿಸುತ್ತಾರಂತೆ. ಅಷ್ಟೇ ಅಲ್ಲ, ‘ಕೆಜಿಎಫ್‍ 3’ ಚಿತ್ರದಲ್ಲೂ ಅಜಿತ್‍ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೌದು, ಇತ್ತೀಚೆಗೆ ಚೆನ್ನೈನಲ್ಲಿ ಪ್ರಶಾಂತ್‍ ನೀಲ್‍ ಮತ್ತು ಅಜಿತ್‍ ಭೇಟಿಯಾಗಿದೆ. ಈ ಭೇಟಿಯಲ್ಲಿ ಅಜಿತ್‍ ಜೊತೆಗೆ ಪ್ರಶಾಂತ್‍ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರಂತೆ. ಅಜಿತ್‍ಗಾಗಿಯೇ ಪ್ರಶಾಂತ್‍ ಒಂದು ಕಥೆ ಮಾಡಿಟ್ಟುಕೊಂಡಿದ್ದಾರಂತೆ. ಇದರ ಜೊತೆಗೆ ಯಶ್‍ ಅಭಿನಯದ ‘ಕೆಜಿಎಫ್‍ 3’ ಚಿತ್ರದಲ್ಲೂ ಒಂದು ಪಾತ್ರ ಮಾಡುವುದಕ್ಕೆ ಅಜಿತ್‍ಗೆ ಪ್ರಶಾಂತ್ ‍ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಚಿತ್ರಗಳನ್ನು ಹೊಂಬಾಳೆ ಫಿಲಂಸ್‍ ನಿರ್ಮಾಣ ಮಾಡುತ್ತಿದೆಯಂತೆ.

ಈ ಸುದ್ದಿಗಳಲ್ಲಿ ಎಷ್ಟು ನಿಜ ಅಥವಾ ಸುಳ್ಳಿದೆ ಎಂದು ಈಗಲೇ ಹೇಳುವುದು ಕಷ್ಟ. ಏಕೆಂದರೆ, ಈ ಬಗ್ಗೆ ಪ್ರಶಾಂತ್‍ ಆಗಲೀ, ಅಜಿತ್‍ ಆಗಲೀ ಎಲ್ಲೂ ಮಾತನಾಡಿಲ್ಲ. ಒಂದು ಪಕ್ಷ ಈ ಚಿತ್ರಗಳು ಸಾಧ್ಯವಾದರೂ ಅದಕ್ಕೆ ಸಾಕಷ್ಟು ಸಮಯವಿದೆ. ಏಕೆಂದರೆ, ಪ್ರಶಾಂತ್‍ ಕೈಯಲ್ಲಿ ಸಾಕಷ್ಟು ಕೆಲಸವಿದ್ದು, ಮುಂದಿನ ತಿಂಗಳಿನಿಂದ ಅವರು ಹೈದರಾಬಾದ್‍ನಲ್ಲಿ ‘ಸಲಾರ್ 2’ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಸದ್ಯ, ‘ವಿದಾ ಮುಯರ್ಚಿ’ ಎಂಬ ಚಿತ್ರದಲ್ಲಿ ಅಜಿತ್‍ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಅಕ್ಟೋಬರ್‍ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago