ಮನರಂಜನೆ

ಪ್ರಶಾಂತ್‍ ನೀಲ್‍ ಜೊತೆಗೆ ಅಜಿತ್ ಎರಡು ಚಿತ್ರ: ‘ಕೆಜಿಎಫ್‍ 3’ನಲ್ಲಿ ನಟಿಸುವ ಸಾಧ್ಯತೆ

ಪ್ರಶಾಂತ್ ನೀಲ್‍ ಮುಂದಿನ ನಡೆ ಏನು? ‘ಸಲಾರ್ 3’ ಎಂಬ ಸುದ್ದಿ ಇದೆ. ಅದೇ ರೀತಿ, ಜ್ಯೂನಿಯರ್‍ ಎನ್‍.ಟಿ.ಆರ್ ಅಭಿನಯದಲ್ಲಿ ಹೊಸ ಚಿತ್ರವನ್ನು ಪರಶಾಂತ್‍ ಶುರು ಮಾಡುತ್ತಾರೆ ಎಂಬ ಮಾತೂ ಇದೆ. ಹೀಗಿರುವಾಗಲೇ, ಕಾಲಿವುಡ್‍ ಅಂಗಳದಿಂದ ಒಂದು ಹೊಸ ಸುದ್ದಿ ಬಂದಿದೆ.

ಇದುವರೆಗೂ ಪ್ರಶಾಂತ್‍ ನೀಲ್‍ ಹೆಸರು ಕನ್ನಡ ಮತ್ತು ತೆಲುಗು ಚಿತ್ರರಂಗಗಳಲ್ಲಿ ಹೆಚ್ಚಾಗಿ ಕೇಳಿಬರುತ್ತಿತ್ತು. ಆದರೆ, ಇದೀಗ ತಮಿಳು ಚಿತ್ರರಂಗದಲ್ಲೂ ಪ್ರಶಾಂತ್‍ ಹೆಸರು ಜೋರಾಗಿಯೇ ಕೇಳಿಬಂದಿದೆ. ಮೂಲಗಳ ಪ್ರಕಾರ, ನಟ ಅಜಿತ್‍ ಅಭಿನಯದಲ್ಲಿ ಪ್ರಶಾಂತ್ ಎರಡು ಚಿತ್ರಗಳನ್ನು ನಿರ್ದೇಶಿಸುತ್ತಾರಂತೆ. ಅಷ್ಟೇ ಅಲ್ಲ, ‘ಕೆಜಿಎಫ್‍ 3’ ಚಿತ್ರದಲ್ಲೂ ಅಜಿತ್‍ ನಟಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಹೌದು, ಇತ್ತೀಚೆಗೆ ಚೆನ್ನೈನಲ್ಲಿ ಪ್ರಶಾಂತ್‍ ನೀಲ್‍ ಮತ್ತು ಅಜಿತ್‍ ಭೇಟಿಯಾಗಿದೆ. ಈ ಭೇಟಿಯಲ್ಲಿ ಅಜಿತ್‍ ಜೊತೆಗೆ ಪ್ರಶಾಂತ್‍ ಹೊಸ ಸಿನಿಮಾ ಬಗ್ಗೆ ಚರ್ಚೆ ಮಾಡಿದ್ದಾರಂತೆ. ಅಜಿತ್‍ಗಾಗಿಯೇ ಪ್ರಶಾಂತ್‍ ಒಂದು ಕಥೆ ಮಾಡಿಟ್ಟುಕೊಂಡಿದ್ದಾರಂತೆ. ಇದರ ಜೊತೆಗೆ ಯಶ್‍ ಅಭಿನಯದ ‘ಕೆಜಿಎಫ್‍ 3’ ಚಿತ್ರದಲ್ಲೂ ಒಂದು ಪಾತ್ರ ಮಾಡುವುದಕ್ಕೆ ಅಜಿತ್‍ಗೆ ಪ್ರಶಾಂತ್ ‍ಮನವೊಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಎರಡೂ ಚಿತ್ರಗಳನ್ನು ಹೊಂಬಾಳೆ ಫಿಲಂಸ್‍ ನಿರ್ಮಾಣ ಮಾಡುತ್ತಿದೆಯಂತೆ.

ಈ ಸುದ್ದಿಗಳಲ್ಲಿ ಎಷ್ಟು ನಿಜ ಅಥವಾ ಸುಳ್ಳಿದೆ ಎಂದು ಈಗಲೇ ಹೇಳುವುದು ಕಷ್ಟ. ಏಕೆಂದರೆ, ಈ ಬಗ್ಗೆ ಪ್ರಶಾಂತ್‍ ಆಗಲೀ, ಅಜಿತ್‍ ಆಗಲೀ ಎಲ್ಲೂ ಮಾತನಾಡಿಲ್ಲ. ಒಂದು ಪಕ್ಷ ಈ ಚಿತ್ರಗಳು ಸಾಧ್ಯವಾದರೂ ಅದಕ್ಕೆ ಸಾಕಷ್ಟು ಸಮಯವಿದೆ. ಏಕೆಂದರೆ, ಪ್ರಶಾಂತ್‍ ಕೈಯಲ್ಲಿ ಸಾಕಷ್ಟು ಕೆಲಸವಿದ್ದು, ಮುಂದಿನ ತಿಂಗಳಿನಿಂದ ಅವರು ಹೈದರಾಬಾದ್‍ನಲ್ಲಿ ‘ಸಲಾರ್ 2’ ಚಿತ್ರದ ಚಿತ್ರೀಕರಣ ಪ್ರಾರಂಭಿಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿಬರುತ್ತಿವೆ.

ಸದ್ಯ, ‘ವಿದಾ ಮುಯರ್ಚಿ’ ಎಂಬ ಚಿತ್ರದಲ್ಲಿ ಅಜಿತ್‍ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಪ್ರಗತಿಯಲ್ಲಿದ್ದು, ಅಕ್ಟೋಬರ್‍ ಕೊನೆಯ ವಾರದಲ್ಲಿ ಚಿತ್ರ ಬಿಡುಗಡೆ ಆಗಲಿದೆ ಎಂದು ಹೇಳಲಾಗುತ್ತಿದೆ.

ಭೂಮಿಕಾ

Recent Posts

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

51 seconds ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

33 mins ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

1 hour ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

6 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

6 hours ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

6 hours ago