ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ ಅತಿಥಿಯಾಗಿ ಭಾಗಿಯಾಗಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ಅಯ್ಯಪ್ಪ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನು ಓದಿ: IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ನನ್ನ ಅಣ್ಣನ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ’ ಎಂದರು.
ಕನ್ನಡ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನಂದಮೂರಿ ಬಾಲಕೃಷ್ಣ, ‘ಶಿವಣ್ಣ ನನ್ನ ತಮ್ಮನ ತರಹ. ನಮ್ಮ ‘ಅಖಂಡ 2’ ಚಿತ್ರವು ಡಿ. 05ರಂದು ಬಿಡುಗಡೆಯಾಗುತ್ತಿದೆ. ‘ಅಖಂಡ 2’ ಚಿತ್ರವು ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.
ಬೋಯಪಾಟಿ ಶ್ರೀನು ನಿರ್ದೇಶನದ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ತಮನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು 14 ರೀಲ್ಸ್ ಪ್ಲಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಮೆನನ್ ನಟಿಸಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್ಗಳಷ್ಟು…