ಮನರಂಜನೆ

ಚಿಂತಾಮಣಿಯಲ್ಲಿ ‘ಅಖಂಡ-2’ ಟ್ರೇಲರ್ ಬಿಡುಗಡೆ; ಬಾಲಯ್ಯ ಚಿತ್ರಕ್ಕೆ ಶಿವಣ್ಣ ಬೆಂಬಲ

ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು.

ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ ಅತಿಥಿಯಾಗಿ ಭಾಗಿಯಾಗಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ಅಯ್ಯಪ್ಪ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಹಲವರು ಭಾಗವಹಿಸಿದ್ದರು.

ಇದನ್ನು ಓದಿ: IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ

ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ನನ್ನ ಅಣ್ಣನ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ’ ಎಂದರು.

ಕನ್ನಡ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನಂದಮೂರಿ ಬಾಲಕೃಷ್ಣ, ‘ಶಿವಣ್ಣ ನನ್ನ ತಮ್ಮನ ತರಹ. ನಮ್ಮ ‘ಅಖಂಡ 2’ ಚಿತ್ರವು ಡಿ. 05ರಂದು ಬಿಡುಗಡೆಯಾಗುತ್ತಿದೆ. ‘ಅಖಂಡ 2’ ಚಿತ್ರವು ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.

ಬೋಯಪಾಟಿ ಶ್ರೀನು ನಿರ್ದೇಶನದ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ತಮನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು 14 ರೀಲ್ಸ್ ಪ್ಲಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಮೆನನ್‍ ನಟಿಸಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

22 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago