ನಂದಮೂರಿ ಬಾಲಕೃಷ್ಣ ನಟನೆಯ ‘ಅಖಂಡ 2’ ಚಿತ್ರವು ‘ಅಖಂಡ’ ಚಿತ್ರದ ಮುಂದುವರಿದ ಭಾಗವಾಗಿದ್ದು, ಡಿ. 05ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಇತ್ತೀಚೆಗೆ ಚಿಕ್ಕಬಳ್ಳಾಪುರದ ಚಿಂತಾಮಣಿಯ ಚಿನ್ನಸಂದ್ರ ಬಳಿ ಬೃಹತ್ ವೇದಿಕೆ ಹಾಕಿ ಟ್ರೇಲರ್ ಬಿಡುಗಗಡೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಶಿವರಾಜಕುಮಾರ್ ವಿಶೇಷ ಅತಿಥಿಯಾಗಿ ಭಾಗಿಯಾಗಿ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಾಹಸ ನಿರ್ದೇಶಕ ರವಿ ವರ್ಮಾ, ಅಯ್ಯಪ್ಪ ಹಾಗೂ ಶರತ್ ಲೋಹಿತಾಶ್ವ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನು ಓದಿ: IFFI ಗಾಲಾ ಪ್ರೀಮಿಯರ್ ನಲ್ಲಿ ಕನ್ನಡದ’ರುಧಿರ್ವನ’ ಪ್ರದರ್ಶನ
ಟ್ರೇಲರ್ ಬಿಡುಗಡೆ ಬಳಿಕ ಮಾತನಾಡಿದ ಶಿವರಾಜಕುಮಾರ್, ‘ನನ್ನ ಅಣ್ಣನ ಸಿನಿಮಾದ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಬಂದಿದ್ದೇನೆ. ನಾವು ಒಂದೇ ಕುಟುಂಬ. ಇವರ ತಂದೆ ನನಗೆ ದೊಡ್ಡಪ್ಪ. ಬಾಲಯ್ಯ ನನಗೆ ಅಣ್ಣ. ಇವರ ಕಾರ್ಯಕ್ರಮಕ್ಕೆ ಬರುವುದು ನಮಗೆ ಖುಷಿಯಾಗುತ್ತದೆ’ ಎಂದರು.
ಕನ್ನಡ ಜನತೆಗೆ ನಮಸ್ಕಾರ ಎಂದು ಕನ್ನಡದಲ್ಲಿ ಮಾತು ಪ್ರಾರಂಭಿಸಿದ ನಂದಮೂರಿ ಬಾಲಕೃಷ್ಣ, ‘ಶಿವಣ್ಣ ನನ್ನ ತಮ್ಮನ ತರಹ. ನಮ್ಮ ‘ಅಖಂಡ 2’ ಚಿತ್ರವು ಡಿ. 05ರಂದು ಬಿಡುಗಡೆಯಾಗುತ್ತಿದೆ. ‘ಅಖಂಡ 2’ ಚಿತ್ರವು ಕೇವಲ ತೆಲುಗು, ಕನ್ನಡ ಸಿನಿಮಾವಲ್ಲ. ಇದು ಪ್ಯಾನ್ ಇಂಡಿಯಾ ಸಿನಿಮಾ’ ಎಂದು ಹೇಳಿದರು.
ಬೋಯಪಾಟಿ ಶ್ರೀನು ನಿರ್ದೇಶನದ ಫ್ಯಾಂಟಸಿ ಆಕ್ಷನ್ ಥ್ರಿಲ್ಲರ್ ಸಿನಿಮಾ ಇದು. ತಮನ್ ಸಂಗೀತ ಸಂಯೋಜಿಸಿರುವ ಈ ಚಿತ್ರವನ್ನು 14 ರೀಲ್ಸ್ ಪ್ಲಸ್ ಬ್ಯಾನರ್ ಮೂಲಕ ನಿರ್ಮಾಣ ಆಗುತ್ತಿದೆ. ರಾಮ್ ಅಚಂತ ಹಾಗೂ ಗೋಪಿಚಂದ್ ಅಚಂತ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಾಲಯ್ಯ ಅವರಿಗೆ ಜೋಡಿಯಾಗಿ ಸಂಯುಕ್ತಾ ಮೆನನ್ ನಟಿಸಿದ್ದು, ಆದಿ ಪಿನಿಸೆಟ್ಟಿ ಖಳನಾಯಕನಾಗಿ ನಟಿಸಿದ್ದಾರೆ.
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…