ಮನರಂಜನೆ

‘ಪುಷ್ಪ 2’ ಚಿತ್ರೀಕರಣಕ್ಕೆ ವಾಪಸ್ಸಾದ ಅಲ್ಲು ಅರ್ಜುನ್ ಮತ್ತು ಸುಕುಮಾರ್

ಕೆಲವೇ ದಿನಗಳ ಹಿಂದಿನ ಮಾತು. ‘ಪುಷ್ಪ 2’ ಚಿತ್ರದ ನಾಯಕ ಅಲ್ಲು ಅರ್ಜುನ್‍ ಮತ್ತು ನಿರ್ದೇಶಕ ಸುಕುಮಾರ್‍ ನಡುವೆ ಎಲ್ಲವೂ ಸರಿಯಿಲ್ಲ, ಇಬ್ಬರೂ ಕಿತ್ತಾಡಿಕೊಂಡಿದ್ದಾರೆ, ಶೂಟಿಂಗ್ ಮಾಡುವುದನ್ನು ಬಿಟ್ಟು ಊರು ಸುತ್ತುತ್ತಿದ್‍ದಾರೆ ಎಂಬಂತಹ ಗುಸುಗುಸುಗಳು ಕೇಳಿಬಂದಿತ್ತು. ಅದಕ್ಕೆ ಸರಿಯಾಗಿ ಚಿತ್ರೀಕರಣ ಸಹ ನಿಂತಿತ್ತು. ಇದರಿಂದ ಚಿತ್ರದ ಬಿಡುಗಡೆ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ಡಿಸೆಂಬರ್ ಬದಲು ಏಪ್ರಿಲ್‍ನಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು.

‘ಪುಷ್ಪ 2’ ಚಿತ್ರದ ಈ ಸ್ಥಿತಿಯ ಬಗ್ಗೆ ಅಭಿಮಾನಿಗಳು ಆತಂಕ ಮನೆ ಮಾಡಿರುವಾಗಲೇ, ಚಿತ್ರೀಕರಣ ಶುರುವಾಗಿರುವುದಷ್ಟೇ ಅಲ್ಲ, ಅಂದುಕೊಂಡಂತೆಯೇ ಡಿಸೆಂಬರ್ 06ರಂದು ಚಿತ್ರವನ್ನು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ. ನಿಜಕ್ಕೂ ನಿರ್ದೇಶಕರ ಮತ್ತು ನಾಯಕನ ನಡುವೆ ಸಮಸ್ಯೆ ಇತ್ತೋ ಅಥವಾ ಊಹಾಪೋಹಗಳೋ ಗೊತ್ತಿಲ್ಲ. ಒಟ್ಟಿನಲ್ಲಿ ಅವರಿಬ್ಬರೂ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ.

ಮೊನ್ನೆ ಸೋಮವಾರದಿಂದ ಹೈದರಾಬಾದ್‍ನ ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಶುರುವಾಗಿದೆ. ಮೈನವಿರೇಳಿಸುವ ಆ್ಯಕ್ಷನ್‍ ದೃಶ್ಯಗಳನ್ನು ಈ ಹಂತದ ಚಿತ್ರೀಕರಣದಲ್ಲಿ ಸೆರೆಹಿಡಿಯಲಾಗುವುದಂತೆ. ಆಗಸ್ಟ್ 31ರ ಹೊತ್ತಿಗೆ ಚಿತ್ರೀಕರಣ ಮುಗಿಸಿ, ಆ ನಂತರ ಡಿ. 6ರಂದು ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಈಗಾಗಲೇ ಪೋಸ್ಟ್ ಪ್ರೊಡಕ್‍ಷನ್ ಕೆಲಸಗಳು ಸಹ ಸೈಡ್‍ ಬೈ ಸೈಡ್ ನಡೆಯುತ್ತಿವೆ.

ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರದ ಕೆಲಸಗಳು ಮುಗಿಯದಿದ್ದರಿಂದ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿತ್ತು. ‘ನಾವು ಹಗಲು-ರಾತ್ರಿ ಶ್ರಮವಹಿಸಿ ಚಿತ್ರೀಕರಣ ಮಾಡುತ್ತಿದ್ದೇವೆ. ಆದರೆ, ಚಿತ್ರದ ಕೆಲಸಗಳು ಇನ್ನೂ ಮುಗಿದಿಲ್ಲ. ಬಾಕಿ ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್ ಕೆಲಸ ಎಂದೆಲ್ಲಾ ಸೇರಿ ಚಿತ್ರ ಮುಗಿಯುವುದಕ್ಕೆ ಇನ್ನಷ್ಟು ಸಮಯ ಬೇಕಾಗಿದೆ. ಹಾಗಾಗಿ, ಚಿತ್ರವನ್ನು ಅನಿವಾರ್ಯವಾಗಿ ಮುಂದೂಡಬೇಕಾಗಿ ಬಂದಿದೆ. ಚಿತ್ರವು ಡಿಸೆಂಬರ್‍ 06ರಂದು ಬಿಡುಗಡೆ ಆಗಲಿದೆ’ ಎಂದು ಚಿತ್ರತಂಡ ಹೇಳಿಕೊಂಡಿತ್ತು.

‘ಪುಷ್ಪ – ದಿ ರೂಲ್‍’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್‍’ ಚಿತ್ರದ ಮುಂದುವರೆದ ಭಾಗವಾಗಿದೆ. ಪುಷ್ಪರಾಜ್‍ ಎಂಬ ಗ್ಯಾಂಗ್‍ಸ್ಟರ್‍ ಜೀವನದಲ್ಲಿ ನಡೆಯುವ ಕಥೆ ಇರುವ ಈ ಚಿತ್ರದಲ್ಲಿ ಪುಷ್ಪರಾಜ್‍ ಆಗಿ ಅಲ್ಲು ಅರ್ಜುನ್‍ ನಟಿಸಿದ್ದಾರೆ. ಇನ್ನು, ರಶ್ಮಿಕಾ ಮಂದಣ್ಣ ನಟಿಸಿದ್ದು, ಮಿಕ್ಕಂತೆ ಧನಂಜಯ್‍, ಫಹಾದ್‍ ಫಾಸಿಲ್‍, ಸುನೀಲ್, ಅನುಸೂಯ ಭಾರದ್ವಾಜ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

3 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

4 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

4 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

4 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

4 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

4 hours ago