ಮನರಂಜನೆ

ಪುಷ್ಪ-2 ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್ಸ್‌ ಕೊಟ್ಟ ಐಕಾನ್‌ ಸ್ಟಾರ್‌!

ಟಾಲಿವುಡ್‌ನ ಬಹು ನಿರೀಕ್ಷಿತಾ ಪುಷ್ಪ-2 ಚಿತ್ರದ ಬಗ್ಗೆ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ ಅವರು ಬಿಗ್‌ ಅಪ್‌ಡೇಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಈ ಚಿತ್ರ ಬೇರೆಯದೇ ರೀತಿಯಲ್ಲಿ ಇರಲಿದೆ ಎಂದು ಅಲ್ಲು ಹೇಳಿದ್ದಾರೆ.

ಮಾರುತಿ ನಗರ ಸುಬ್ರಮಣ್ಯಂ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ ನಲ್ಲಿ ಮಾತನಾಡಿರುವ ಅಲ್ಲು ಅರ್ಜುನ್‌, ನಿಮ್ಮೆಲ್ಲರಿಗೂ ಇಷ್ಟ ಆಗುವ ಹಾಗೆ ಬೇರೆ ರೀತಿಯಲ್ಲಿಯೇ ಚಿತ್ರ ಬರುತ್ತಿದೆ. ಈಗ ಏನನ್ನು ಹೇಳುವ ಮಾತಿಲ್ಲ, ಡಿಸೆಂಬರ್‌ 6ಕ್ಕೆ ತಗ್ಗೋ ಮಾತೆ ಇಲ್ಲ ಎಂದು ಅಲ್ಲು ಹೇಳಿದ್ದಾರೆ.

ಇನ್ನು ಅಲ್ಲು ಅರ್ಜುನ್‌ ಅವರು ಚಿತ್ರ ರಿಲೀಸ್‌ ಆಗಲಿರುವ ದಿನಾಂಕದ ಜೊತೆಗೆ ತಾವು ಬರುವುದಾಗಿ ಹೇಳಿದನ್ನು ಕಂಡ ಸುಕುಮಾರ್‌ ಮುಖದಲ್ಲಿ ಮಂದಹಾಸ ಮನೆ ಮಾಡಿತ್ತು. ಆ ಮೂಲಕ ತಮ್ಮ ಚಿತ್ರದ ಅಧಿಕೃತ ಆಗಮನದ ಬಗ್ಗೆ ನಟ ಮತ್ತೊಮ್ಮೆ ಮಾತನಾಡಿ ತಮ್ಮ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದ್ದಾರೆ.

ದೊಡ್ಡ ತಾರಾಂಗಣವನ್ನೇ ಹೊಂದಿರುವ ಪುಷ್ಪ-2 ಚಿತ್ರದಲ್ಲಿ ಅಲ್ಲು ಅರ್ಜುನ್‌ ನಾಯಕರಾದರೆ, ಇವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ಮುಖ್ಯ ಪಾತ್ರದಲ್ಲಿ ಮಲಯಾಳಂನ ಖ್ಯಾತ ನಟ ಫಹಾದ್‌ ಫಾಸಿಲ್‌ ನಟಿಸಿದ್ದು, ಈ ಚಿತ್ರಕ್ಕೆ ದೇವಿ ಶ್ರೀ ಪ್ರಸಾದ್‌ ಸಂಗೀತಾ ಸಂಯೋಜಿಸಿದ್ದು, ಈ ಚಿತ್ರವನ್ನು ಸುಕುಮಾರ್‌ ನಿರ್ದೇಶಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

2 hours ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

3 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago