ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ 2’ ಚಿತ್ರ ತಂಡದಿಂದ ಮಹತ್ವದ ಸುದ್ದಿಯೊಂದು ಬಂದಿದೆ. ಮತ್ತೇನಾದರೂ ಚಿತ್ರದ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ ಇದೆಯಾ ಎಂಬ ಪ್ರಶ್ನೆ ಬರಬಹುದು. ಅದು ಸಹಜ. ಏಕೆಂದರೆ, ಈಗಾಗಲೇ ಎರಡು ಬಾರಿ ಚಿತ್ರದ ಬಿಡುಗಡೆ ದಿನಾಂಕ ಮುಂದೆ ಹೋಗಿದೆ. ಈ ಬಾರಿಯೂ ಅದು ಮುಂದುವರೆದಿದೆಯಾ ಎಂದು ಚಿತ್ರದ ಅಭಿಮಾನಿಗಳಲ್ಲಿ ಸಹಜವಾಗಿ ಆತಂಕವಾಗಬಹುದು. ಬಿಡುಗಡೆ ದಿನಾಂಕದಲ್ಲಿ ಬದಲಾವಣೆಯಾಗಿದೆ. ಆದರೆ, ಚಿತ್ರ ಮುಂದಕ್ಕೆ ಹೋಗಿಲ್ಲ. ಬದಲಿಗೆ, ಡಿ.6ರ ಬದಲು ಒಂದು ದಿನ ಮುಂಚಿತವಾಗಿಯೇ, ಅಂದರೆ ಡಿ.5ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಇನ್ನು, ‘ಪುಷ್ಪ 2’ ಚಿತ್ರದ ವಿತರಣೆ, ಡಿಜಿಟಿಲ್, ಸ್ಯಾಟಿಲೈಟ್ ಹಕ್ಕುಗಳಿಂದ 1000 ಕೋಟಿ ರೂ. ಗಳಿಸಿದೆ ಎಂದು ಹೇಳಲಾಗಿದೆ. ಈ ಪೈಕಿ ವಿತರಣೆ ಹಕ್ಕುಗಳಿಂದ ಚಿತ್ರಕ್ಕೆ 640 ಕೋಟಿ ರೂ. ಬಂದರೆ, ಬೇರೆ ಹಕ್ಕುಗಳಿಂದ 425 ಕೋಟಿ ರೂ.ಗಳಿಕೆ ಎಂದು ಹೇಳಲಾಗುತ್ತಿದೆ. ಅವೆರಡೂ ಸೇರಿ ಚಿತ್ರವು ಬಿಡುಗಡೆಗೂ ಮೊದಲೇ 1000 ಕೋಟಿ ರೂ. ಕ್ಲಬ್ಗೆ ಸೇರ್ಪಡೆಯಾಗಿದೆ.
ಈ ಚಿತ್ರಕ್ಕೆ ಅಲ್ಲು ಅರ್ಜುನ್ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬ ಚರ್ಚೆ ಇದೀಗ ಶುರುವಾಗಿದೆ. ಮೂಲಗಳ ಪ್ರಕಾರ, ಈ ಚಿತ್ರಕ್ಕಾಗಿ ಅರ್ಜುನ್ ಪಡೆದಿರುವ ಸಂಭಾವನೆ ದೇಶದಲ್ಲೇ ಮೊದಲಂತೆ. ಭಾರತೀಯ ಚಿತ್ರರಂಗದ ಯಾವ ಸ್ಟಾರ್ ನಟ ಸಹ ಇಷ್ಟೊಂದು ಸಂಭಾವನೆಯನ್ನು ಪಡೆದಿರಲಿಲ್ಲ ಎಂದು ಹೇಳಲಾಗಿದೆ. ಅಷ್ಟೊಂದು ಸಂಭಾವನೆ ಪಡೆಯುವ ಮೂಲಕ ಅರ್ಜುನ್, ದೇಶದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರಾಗಿದ್ದಾರೆ ಎನ್ನುವುದು ವಿಶೇಷ.
ಮೂಲಗಳ ಪ್ರಕಾರ, ಅಲ್ಲು ಅರ್ಜುನ್ ಈ ಚಿತ್ರಕ್ಕಾಗಿ 275 ಕೋಟಿ ರೂ. ಸಂಭಾವನೆ ಪಡೆದಿದ್ದರಂತೆ. ಇದಕ್ಕೂ ಮುನ್ನ ಶಾರೂಖ್ ಖಾನ್, ‘ಪಠಾಣ್’ ಚಿತ್ರಕ್ಕೆ 200 ಕೋಟಿ ರೂ. ಸಂಭಾವನೆ ಪಡೆದರು ಎಂದು ಹೇಳಲಾಗಿದೆ. ಇನ್ನು, ತಮಿಳು ನಟ ವಿಜಯ್ ತಮ್ಮ ಮುಂದಿನ ಚಿತ್ರಕ್ಕೆ 275 ಕೋಟಿ ರೂ.ಗಳನ್ನು ಸಂಭಾವನೆಯಾಗಿ ಪಡೆದರಂತೆ. ಅಲ್ಲು ಅರ್ಜುನ್ ಅವರಿಬ್ಬರನ್ನೂ ಹಿಂದಿಕ್ಕಿ ‘ಪುಷ್ಪ 2 – ದಿ ರೂಲ್’ ಚಿತ್ರಕ್ಕೆ 300 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.
‘ಪುಷ್ಪ – ದಿ ರೂಲ್’ ಚಿತ್ರವು ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಪುಷ್ಪ – ದಿ ರೈಸ್’ ಚಿತ್ರದ ಮುಂದುವರೆದ ಭಾಗವಾಗಿದೆ. ಅಲ್ಲು ಅರ್ಜುನ್ ಈಈ ಚಿತ್ರದಲ್ಲಿ ಪುಷ್ಪರಾಜ್ ಆಗಿ ನಟಿಸಿದ್ದು, ಅವರಿಗೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಮಿಕ್ಕಂತೆ ಧನಂಜಯ್, ಫಹಾದ್ ಫಾಸಿಲ್, ಸುನೀಲ್, ಅನುಸೂಯ ಭಾರದ್ವಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಅರಸಿನಕೆರೆ ಗ್ರಾಮದಲ್ಲಿ ವಾಲ್ಮೀಕಿ ಭವನ ನಿರ್ಮಾಣವಾಗಿ ಎರಡು ವರ್ಷ ಕಳೆದಿದ್ದರೂ ಉದ್ಘಾಟನೆಯಾಗದೇ ಇರುವುದರಿಂದ ಸಾರ್ವಜನಿಕರು…
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ರಸ್ತೆ ಹಾಳಾಗಿದ್ದು, ಮಳೆಗಾಲದಲ್ಲಿ ಗ್ರಾಮಸ್ಥರು ಓಡಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮದ ಹೊಸ ಬಡಾವಣೆಗಳಿಗೆ…
ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ…
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದು, ಅದಕ್ಕೆ ಪೂರಕವಾಗಿ ಸಂಜೆ ೭ರಿಂದ ರಾತ್ರಿ ೯ ರವರೆಗೆ ಎಲ್ಲ ಮನೆಗಳಲ್ಲೂ ಟಿವಿ…
ಗಾಲ್ಫ್ ಕ್ಲಬ್ ಆಡಳಿತ ಮಂಡಳಿಗೆ ಮೈಸೂರು ನಗರಪಾಲಿಕೆ ನೋಟಿಸ್ ಮೈಸೂರು: ನಗರದ ಜಯಚಾಮರಾಜ ಒಡೆಯರ್ ಗಾಲ್ಛ್ ಕ್ಲಬ್ ಆವರಣದಲ್ಲಿ ನಿಯ ಮಾವಳಿ…
ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು…