ಮನರಂಜನೆ

ಎಂಟು ವರ್ಷಗಳ ನಂತರ ವಾಪಸ್ಸಾದ ಅಮೂಲ್ಯ: ‘ಪೀಕಬೂ’ ಚಿತ್ರದಲ್ಲಿ ನಟನೆ

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಅಂದಹಾಗೆ, ಅಮೂಲ್ಯ ಅವರನ್ನು ವಾಪಸ್ಸು ಕರೆತರುತ್ತಿರುವುದು ನಿರ್ದೇಶಕ ಮಂಜು ಸ್ವರಾಜ್‍. ಸದ್ಯ, ‘ಸರಳ ಸುಬ್ಬರಾವ್‍’ ಎಂಬ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಮಂಜು ಸ್ವರಾಜ್‍, ದಶಕದ ಹಿಂದೆ ‘ಶ್ರಾವಣಿ ಸುಬ್ರಹ್ಮಣ್ಯ’ ಚಿತ್ರವನ್ನು ನಿರ್ದೇಶಿಸಿದ್ದರು. ಗಣೇಶ್‍ ಮತ್ತು ಅಮೂಲ್ಯ ಅಭಿನಯದ ಈ ಚಿತ್ರವು ಶತದಿನ ಕಂಡಿತ್ತು.

ಇದನ್ನು ಓದಿ: ಮೂರ್ನಾಲ್ಕು ವರ್ಷಗಳ ನಂತರ ಕೃಷ್ಣ ಡ್ಯಾನ್ಸ್ ಮಾಡಿದ ಹಾಡೊಂದು ಬಿಡುಗಡೆ

ಇದೀಗ ಅಮೂಲ್ಯ ಅವರನ್ನು ಪುನಃ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ ಮಂಜು ಸ್ವರಾಜ್. ಭಾನುವಾರ, ಅಮೂಲ್ಯ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ‘ಪೀಕಬೂ’ ಚಿತ್ರದ ಘೋಷಣೆಯಾಗಿದೆ. ಹೊಸ ಟೀಸರ್ ಬಿಡುಗಡೆ ಮಾಡುವ ಮೂಲಕ ಈ ಚಿತ್ರದ ಘೋಷಣೆಯಾಗಿದೆ. ಚಾರ್ಲಿ ಚಾಪ್ಲಿನ್‍ ಶೈಲಿಯಲ್ಲಿ ಅಮೂಲ್ಯ ನೃತ್ಯ ಮಾಡುವ ಸನ್ನಿವೇಶಗಳು ಈ ಟೀಸರ್‍ನಲ್ಲಿದ್ದು, ವಿ. ನಾಗೇಂದ್ರ ನೃತ್ಯ ನಿರ್ದೇಶನ ಮಾಡಿದ್ದಾರೆ.

‘ಪೀಕಬೂ’ ಎಂದರೆ ಕಣ್ಣಾಮುಚ್ಚಾಲೆ ಎಂದರ್ಥ. ಕಮರ್ಷಿಯಲ್‍ ಅಂಶಗಳ ಜೊತೆಗೆ ಸಂದೇಶವಿರುವಂತಹ ಚಿತ್ರವಿದು. ಈ ಚಿತ್ರದಲ್ಲಿ ಅಮೂಲ್ಯ ನಾಯಕಿಯಾಗಿ ನಟಿಸುತ್ತಿದ್ದು, ನಾಯಕ ಯಾರು ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ಈ ಚಿತ್ರಕ್ಕೆ ಸುರೇಶ್‍ ಬಾಬು ಛಾಯಾಗ್ರಹಣ ಮತ್ತು ವೀರ್‍ ಸಮರ್ಥ್‍ ಸಂಗೀತವಿದೆ.

‘ಪೀಕಬೂ’ ಚಿತ್ರವನ್ನು ಶ್ರೀ ಕೆಂಚಾಂಬಾ ಫಿಲಂಸ್‌ ಅಡಿಯಲ್ಲಿ ಗಣೇಶ್‌ ನಿರ್ಮಾಣ ಮಾಡುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago