anushrere
ಕನ್ನಡದ ನಟಿ, ಸ್ಟಾರ್ ನಿರೂಪಕಿ ಅನುಶ್ರೀ ಅವರಿಂದು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 10.56ಕ್ಕೆ ರೋಷನ್ ಅನುಶ್ರೀಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.
ಕೊಡಗು ಮೂಲದ ರಾಮಮೂರ್ತಿ ಹಾಗೂ ಸಿಸಿಲಿಯಾ ಅವರ ಪುತ್ರ ರೋಷನ್ ಜೊತೆ ಅನುಶ್ರೀ ವಿವಾಹ ಆಗಿದ್ದಾರೆ. ಇನ್ನೂ ನಿರೂಪಕಿ ಅನುಶ್ರೀ ಹಾಗೂ ರೋಷನ್ ಅದ್ಧೂರಿ ಮದುವೆಗೆ ಸ್ಟಾರ್ ನಟ-ನಟಿಯರು ಬಂದು ನವಜೋಡಿಗೆ ಶುಭ ಹಾರೈಸಿದ್ದಾರೆ.
ನಾದಬ್ರಹ್ಮ ಹಂಸಲೇಖ, ಶರಣ್, ಸೋನಲ್ ಮಂಥೆರೋ, ವಿಜಯ್ ರಾಘವೇಂದ್ರ ಸೇರಿದಂತೆ ಮುಂತಾದವರು ಅನುಶ್ರೀ-ರೋಷನ್ ಕಲ್ಯಾಣಕ್ಕೆ ಸಾಕ್ಷಿಯಾಗಿದ್ದರು.
ಇನ್ನು ಅನುಶ್ರೀ ಕೊರಳಿಗೆ ರೋಷನ್ ಮಾಂಗಲ್ಯಧಾರಣೆ ಮಾಡುವ ವೇಳೆ ಅನುಶ್ರೀ ತಾಳಿಯನ್ನು ಬಿಗಿ ಹಿಡಿದು ಭಾವುಕರಾದರು. ಪತ್ನಿ ಕಣ್ಣಾಲಿಗಳು ಒದ್ದೆಯಾಗಿದ್ದನ್ನು ಕಂಡ ರೋಷನ್ ಅನುಶ್ರೀ ಅವರನ್ನು ಸಮಾಧಾನ ಮಾಡಿದ್ದಾರೆ.
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…