ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರು ಭಾರತೀಯ ಪೊಲೀಸ್ ಸೇವೆ ಅಧಿಕಾರಿ ವೃತ್ತಿಗೆ ಸ್ವಯಂ ನಿವೃತ್ತಿ ಘೋಷಿಸಿದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಇದರ ನಡುವೆಯೇ ನಟಿಸಿದ ಮೊದಲ ಕನ್ನಡ ಚಲನಚಿತ್ರ ಅರಬ್ಬಿ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ.
ಎರಡೂ ಕೈಗಳ್ಳಿಲ್ಲದ ಕನ್ನಡಿಗ ಕೆಎಸ್ ವಿಶ್ವಾಸ್ ಅವರು ಈಜು ಸ್ಪರ್ಧೆಯಲ್ಲಿ ಭಾಗವಹಿಸಿ ಸಾಧನೆಯ ನೈಜ ಘಟನೆ ಆಧಾರಿತ ಚಲನಚಿತ್ರ ಅರಬ್ಬಿಯಲ್ಲಿ ಅಣ್ಣಾಮಲೈ ವಿಶ್ವಾಸ್ ರವರ ತರಬೇತುದಾರಾಗಿ ನಟಿಸಿದ್ದು, ಕೆಲವು ಸ್ಪೂರ್ತಿದಾಯಕ ಖಡಕ್ ಡೈಲಾಗ್ ಹಾಗೂ ಆಕ್ಷನ್ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟ್ರೈಲರ್ ನಲ್ಲಿ ಅಣ್ಣಾಮಲೈ ರವರು ಅನುಭವಿ ನಾಯಕರಂತೆ ನಟಿಸಿರುವುದು ಕಂಡು ಬಂದಿದೆ.
ಕೆಎಸ್ ವಿಶ್ವಾಸ್ ಅವರು ತಮ್ಮ ಚಿತ್ರದಲ್ಲಿ ಅವರೇ ನಟಿಸಿದ್ದು, ಎರಡು ಕೈಗಳಿಲ್ಲದ ವ್ಯಕ್ತಿ ಸಮಾಜದಲ್ಲಿ ಎದುರಿಸಿರುವ ಸಮಸ್ಯೆಗಳನ್ನು ಮೆಟ್ಟಿ ನಿಂತು ಯಾವ ರೀತಿಯಲ್ಲಿ ಸಾಧನೆ ಮಾಡಿದರು, ಅವರಿಗೆ ಸಹಾಯ ಮಾಡಿದವರು ಯಾರು? ಅವರ ಈ ಸಾಧನೆಗೆ ಸ್ಪೂರ್ತಿ ಏನು ? ಎಂಬ ಹಲವು ವಿಚಾರಗಳನ್ನು ಈ ಚಿತ್ರ ಒಳಗೊಂಡಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…