ಮನರಂಜನೆ

ಪ್ರೀತಿನ ದ್ಯಾವ್ರು ಅಂತಿದ್ದಾರೆ ಅನೂಪ್‍ ಸೀಳಿನ್‍ …

ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್‍ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ. ಇವೆರಡೂ ಸಂಭ್ರಮವನ್ನುಉ ಹಂಚಿಕೊಳ್ಳುವುದಕ್ಕೆ ಅವರೊಂದು ಆಲ್ಬಂ ಸಾಂಗ್ ಮಾಡಿದ್ದಾರೆ.

‘ಪ್ರೀತಿ ಅನ್ನೋ ದ್ಯಾವ್ರು’ ಎಂಬ ಹಾಡು ಬುಧವಾರ ಸಂಜೆ ಜೆಪಿ ಮ್ಯೂಸಿಕ್‍ ಯೂಟ್ಯೂಬ್‍ ಚಾನಲ್‍ನಲ್ಲಿ ಬಿಡುಗಡೆ ಆಗಿದೆ. ಅನೂಪ್‍ ಪತ್ನಿ ಕೃತಿ ಶೆಟ್ಟಿ ಈ ಹಾಡನ್ನು ಬಿಡುಗಡೆ ಮಾಡಿ, ಶುಭಕೋರಿದ್ದಾರೆ.

‘ಪ್ರೀತಿ ಅನ್ನೊ ದ್ಯಾವ್ರು ನಮ್ಮ ಒಳಗೆ ಬಂದು ಕುಂತವ್ನೆ …’ ಎಂದು ಸಾಗುವ ಈ ಹಾಡಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದು, ಅನೂಪ್‍ ಸಂಗೀತ ಸಂಯೋಜಿಸುವುದರ ಜೊತೆಗೆ ಹಾಡಿಗೆ ಧ್ವನಿಯಾಗಿದ್ದಾರೆ. ಅಷ್ಟೇ ಅಲ್ಲ, ಈ ಹಾಡಿಗೆ ಅವರೇ ಅಭಿನಯಿಸಿದ್ದಾರೆ. ಅನೂಪ್‍ ಪತ್ನಿ ಕೃತಿ ಈ ವಿಡಿಯೋ ಆಲ್ಬಂ ಹಾಡನ್ನ ನಿರ್ಮಿಸಿದ್ದಾರೆ. ಸುಜ್ಞಾನ್ ಮೂರ್ತಿ‌ ಛಾಯಾಗ್ರಹಣ ಈ ಹಾಡಿಗಿದೆ.

ಈ ಹಾಡಿನ ಕುರಿತು ಮಾತನಾಡಿರುವ ಅನೂಪ್‍ ಸೀಳಿನ್‍, ‘ಈ ತರಹದ ಮ್ಯೂಸಿಕ್ ಆಲ್ಬಂ‌ ಮಾಡಬೇಕು ಎಂಬ ಆಸೆ ಮೊದಲಿಂದ ಇತ್ತು. ‘ಪ್ರೀತಿ ಅನ್ನೋ ದ್ಯಾವ್ರು’ ಮನುಷ್ಯ ಮತ್ತು ಪ್ರಕೃತಿ ನಡುವಿನ ಪರಿಕಲ್ಪನೆಯಿಂದ ಮಾಡಿದ ಹಾಡು. ಹುಟ್ಟಿಂದ ಸಾವಿನವರೆಗೆ ಒಂದಷ್ಟು ವಿಚಾರಗಳನ್ನ ಈ ಹಾಡಿನ ಮೂಲಕ ಹೇಳಲಾಗಿದೆ. ಇದು ಆರಂಭ ಅಷ್ಟೇ. ಮುಂದಿನ ದಿನಗಳಲ್ಲಿ ಇನ್ನಷ್ಟು ಹಾಡುಗಳನ್ನು ಮಾಡುವ ಉದ್ದೇಶವಿದೆ’ ಎಂದರು.

ಈ ಹಾಡು ಯುಟ್ಯೂಬ್ ಜೊತೆಗೆ ಎಲ್ಲಾ ಹಾಡಿನ ವೇಡಿಕೆಗಳಲ್ಲೂ ಲಭ್ಯವಿದೆ.

ಭೂಮಿಕಾ

Recent Posts

ಏಪ್ರಿಲ್.‌5ರಂದು ಆದಿಚುಂಚನಗಿರಿಗೆ ಪ್ರಧಾನಿ ಮೋದಿ ಭೇಟಿ

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠಕ್ಕೆ ಏಪ್ರಿಲ್.‌15ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಶ್ರೀಮಠದಲ್ಲಿ…

5 mins ago

ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತಗೊಳಿಸಲು ಶ್ರಮಿಸಿ : ಎಡಿಸಿ ತಾಕೀತು

ಮೈಸೂರು : ಬಾಲ ಕಾರ್ಮಿಕ ಪದ್ಧತಿಯು ದೇಶಕ್ಕೆ ಮಾರಕವಾಗಿದ್ದು, ಮೈಸೂರು ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತವಾಗಿಸಲು ಅಧಿಕಾರಿಗಳು ಹೆಚ್ಚಿನ ಜಾಗೃತಿ…

20 mins ago

ಆಟೋ ಗ್ಯಾಸ್‌ ಕೊರತೆ ; ವದಂತಿಗಳಿಗೆ ಕಿವಿಗೊಡದಂತೆ ಸಲಹೆ

ಬೆಂಗಳೂರು : ರಾಜ್ಯದಲ್ಲಿರುವ ಆಟೋ ಮಾಲೀಕರು ಮತ್ತು ಚಾಲಕರು ಆತಂಕಕ್ಕೆ ಒಳಗಾಗಬಾರದು ಹಾಗೂ ಆಟೋ ಗ್ಯಾಸ್ ಕೊರತೆಯ ಬಗ್ಗೆ ಯಾವುದೇ…

29 mins ago

ಚಿಕ್ಕಮಗಳೂರು | ಚಾರಣಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿ ನಾಪತ್ತೆ ; ತೀವ್ರ ಹುಡುಕಾಟ

ಚಿಕ್ಕಮಗಳೂರು : ಬಾಬಾಬುಡನ್‌ಗಿರಿ ಪ್ರದೇಶದಕ್ಕೆ ಪ್ರವಾಸ ಬಂದಿದ್ದ ಕೇರಳದ 16 ವರ್ಷದ ವಿದ್ಯಾರ್ಥಿನಿ ಶ್ರೀನಂದಾ ನಾಪತ್ತೆಯಾಗಿದ್ದು, ಕುಂಟುಬದವರು ಮತ್ತು ಪೊಲೀಸರು…

41 mins ago

ಕದನ ವಿರಾಮ ಬೆನ್ನಲ್ಲೇ ಕಚ್ಚಾ ತೈಲದ ದರ ದಿಢೀರ್‌ ಕುಸಿತ

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನೊಂದಿಗೆ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ…

1 hour ago

ಪೊನ್ನಂಪೇಟೆ | ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಮಡಿಕೇರಿ : ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಬಲಿಯಾದ ಘಟನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ನಡೆದಿದೆ. ಆನೆ ದಾಳಿಯಲ್ಲಿ ಸಾವನ್ನಪ್ಪಿದವರನ್ನು…

1 hour ago