ಮನರಂಜನೆ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಇನ್ನೊಂದು ಬಯೋಪಿಕ್‍ ಘೋಷಣೆ

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಈಗಾಗಲೇ ಕೆಲವು ವರ್ಷಗಳ ಹಿಂದೆ ಒಂದು ಬಯೋಪಿಕ್‍ ಚಿತ್ರ ಬಂದಿದ್ದು, ಆ ಚಿತ್ರದಲ್ಲಿ ನಟ ವಿವೇಕ್‍ ಒಬೆರಾಯ್‍, ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ಓಮುಂಗ್‍ ಕುಮಾರ್ ನಿರ್ದೇಶನ ಮಾಡಿದ್ದರು. ಈಗ ಮೋದಿ ಅವರ ಕುರಿತು ಇನ್ನೊಂದು ಚಿತ್ರ ತಯಾರಾಗುತ್ತಿದೆ.

ಇಂದು‌ ನರೇಂದ್ರ ಮೋದಿ ಅವರ ಜನ್ಮದಿನ. ಅವರ ಹುಟ್ಟುಹಬ್ಬದ ಅಂಗವಾಗಿ ಸಿಲ್ವರ್ ಕ್ಯಾಸ್ಟ್ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯು ‘ಮಾ ವಂದೇ’ ಎಂಬ ಚಿತ್ರ ಘೋಷಣೆ‌ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿಯವರ ಜೀವನ ಆಧಾರಿತ ಸಿನಿಮಾವಾಗಿದೆ. ವೀರ್ ರೆಡ್ಡಿ ಎಂ. ನಿರ್ಮಿಸಿರುವ ಈ ಚಿತ್ರದಲ್ಲಿ ಮಲಯಾಳಂ ನಟ ಉನ್ನಿ ಮುಕುಂದನ್ ನರೇಂದ್ರ ಮೋದಿಯವರ ಪಾತ್ರದಲ್ಲಿ ನಟಿಸಲಿದ್ದಾರೆ.

ಕ್ರಾಂತಿ ಕುಮಾರ್ ಸಿ.ಎಚ್.ನಿರ್ದೇಶಿಸಲಿರುವ ‘ಮಾ ವಂದೇ’ ಚಿತ್ರದಲ್ಲಿ ಚಿಕ್ಕ ಹುಡುಗನಿಂದ ಭಾರತದ ಪ್ರಧಾನಿಯಾಗುವವರೆಗಿನ ಮೋದಿಯವರ ಪ್ರಯಾಣವನ್ನು ಕಟ್ಟಿಕೊಡಲಾಗುವುದು. ಈ ಚಿತ್ರವು ಅವರ ವೈಯಕ್ತಿಕ ಮತ್ತು ರಾಜಕೀಯ ಜೀವನ ಮತ್ತು ಸತ್ಯ ಘಟನೆಗಳ ಆಧಾರದ ಮೇಲೆ ಚಿತ್ರ‌ ಮೂಡಿ ಬರಲಿದೆ.

ಇದನ್ನು ಓದಿ: ‘ಗೆರಿಲ್ಲಾ WAR’ ಚಿತ್ರಕ್ಕೆ ಉಪೇಂದ್ರ ನಾಯಕ: ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ

ಈ ಕುರಿತು ಮಾತನಾಡಿರುವ ನಿರ್ಮಾಪಕ ವೀರ್ ರೆಡ್ಡಿ, ‘ಈ ಚಿತ್ರವು ಮೋದಿ ಅವರ ವೈಯಕ್ತಿಕ ಮತ್ತು ರಾಜಕೀಯ ಪ್ರಯಾಣದ ಘಟನೆಗಳು ಮತ್ತು ಮೈಲಿಗಲ್ಲುಗಳನ್ನು ಅಧಿಕೃತ ರೀತಿಯಲ್ಲಿ ಪ್ರಸ್ತುತಪಡಿಸುತ್ತದೆ. ‘ಮಾ ವಂದೇ’ ಚಿತ್ರವನ್ನು ಪ್ಯಾನ್ ಇಂಡಿಯಾ ಚಿತ್ರವಾಗಿ ರೂಪಿಸಲಾಗುವುದು. ಭಾರತೀಯ ಭಾಷೆಗಳ ಜೊತೆಗೆ ಇಂಗ್ಲಿಷ್‌ನಲ್ಲಿ ನಿರ್ಮಿಸಲಾಗುವುದು. ಮೋದಿ ಮತ್ತು ಅವರ ತಾಯಿ ಹೀರಾಬೆನ್ ನಡುವಿನ ಬಾಂಧವ್ಯವನ್ನು ಚಿತ್ರದಲ್ಲಿ ಭಾವನಾತ್ಮಕವಾಗಿ ತೋರಿಸಲಾಗುವುದು’ ಎಂದು ಹೇಳಿದ್ದಾರೆ.

‘ಮಾ ವಂದೇ’ ಚಿತ್ರಕ್ಕೆ ‘ಬಾಹುಬಲಿ’ ಛಾಯಾಗ್ರಾಹಕ ಕೆ.ಕೆ.ಸೆಂಧಿಲ್‍ ಕುಮಾರ್‍ ಅವರ ಛಾಯಾಗ್ರಹಣ, ರವಿ ಬಸ್ರೂರು ಸಂಗೀತ, ಶ್ರೀಕರ ಪ್ರಸಾದ್ ಸಂಕಲನವಿದೆ. ಚಿತ್ರದಲ್ಲಿ ಉನ್ನಿ ಮುಕುಂದನ್‍ ಹೊರತುಪಡಿಸಿ, ಯಾವೆಲ್ಲಾ ಕಲಾವಿದರು ಇರಲಿದ್ದಾರೆ ಎಂಬ ಮಾಹಿತಿ ಇನ್ನಷ್ಟೇ ಹೊರಬೀಳಲಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

54 mins ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

56 mins ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

58 mins ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

4 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

4 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

4 hours ago