ಮನರಂಜನೆ

ಡಿ ಬಾಸ್‌ಗೆ ಮತ್ತೊಂದು ಸಂಕಷ್ಟ: ಕೊಲೆ ಪ್ರಕರಣದ ಬೆನ್ನಲ್ಲೇ ಮತ್ತೊಂದು ಪ್ರಕರಣ ದಾಖಲು?

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ ಸ್ಟಾರ್‌ ನಟ ದರ್ಶನ್‌ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ.

ಇದರ ಬೆನ್ನಲ್ಲೇ ಡಿ ಗ್ಯಾಂಗ್‌ಗೆ ಮತ್ತೊಂದು ಸಂಕಟ ಎದುರಾಗಿದ್ದು, ದರ್ಶನ್‌ ಅವರು 10 ವರ್ಷಗಳ ಹಿಂದೆ ದರ್ಶನ್‌ ಬಳಿ ಸಹಾಯಕ್ಕಾಗಿ ಹೋಗಿದ್ದ ಸಂತ್ರಸ್ತನ ಮೇಲೆ ಹಲ್ಲೆ ಸಂಬಂಧ ದೂರು ದಾಖಲಾಗಿದೆ.

ಈ ಸಂಬಂಧ ಕನ್ನಡದ ಖಾಸಗಿ ವಾಹಿನಿ ಟಿವಿ9 ವರದಿ ಮಾಡಿದ್ದು, 10 ವರ್ಷಗಳ ಹಿಂದಿನ ಹಲ್ಲೆ ವಿರುದ್ಧ ಟಿವಿ9 ವಾಹಿನಿಯಲ್ಲಿ ನ್ಯಾಯಕ್ಕಾಗಿ ಸಂತ್ರಸ್ಥೆ ಕುಟುಂಬ ತಮ್ಮ ಅಳಲನ್ನು ತೋಡಿಕೊಂಡಿದೆ.

ನಟ ದರ್ಶನ್‌ ತಮ್ಮ ಮೈಸೂರಿನ ಫಾರ್ಮ್‌ಹೌಸ್‌ಗೆ ಪರಿಹಾರ ಕೇಳಲು ಬಂದ ಸಂತ್ರಸ್ತನ ಮೇಲೆ ನಾಯಿಯಿಂದ ದಾಳಿ ಮಾಡಿಸಿ ವಿಕೃತ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ನಿಜಲಿಂಗಪುರದ ಮಹೇಶ್‌ ಎಂಬುವವರೇ ದರ್ಶನ್‌ರಿಂದ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ದರ್ಶನ್‌ ಅವರ ವಿನೀಶ್‌ ದರ್ಶನ್‌ ತೂಗುದೀಪ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡುತ್ತದ್ದ ಮಹೇಶ್‌ಗೆ ಎತ್ತು ತನ್ನ ಕೊಂಬಿನಿಂದ ತಿವಿದಿತ್ತು. ಪರಿಣಾಮ ಅವರ ಕಣ್ಣಿಗೆ ಪೆಟ್ಟಾಗಿದ್ದು, ಡಿ ಗ್ಯಾಂಗ್‌ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಳಿಕ ಅವರಿಗೆ ಚಿಕಿತ್ಸೆ ಒದಗಿಸಿ ಮಹೇಶ್‌ ಅವರ ಮನೆಗೆ ಕರೆದೊಯ್ದು ಬಿಟ್ಟಿದ್ದಾರೆ.

ಇದಾದ ನಂತರ ದರ್ಶನ್‌ ಅವರ ಮನೆ ಕಡೆ ಮತ್ತೆಂದು ಮುಖ ಹಾಕಿಲ್ಲ. ಮಹೇಶ್‌ ಕಳೆದುಕೊಂಡು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದ ಕುಟುಂಬ ದರ್ಶನ್‌ ಅವರ ಫಾರ್ಮ್‌ಹೌಸ್‌ಗೆ ತೆರಳಿ ಪರಿಹಾರಕ್ಕಾಗಿ ಕೈಚಾಚಿದ್ದಾರೆ. ಇದನ್ನು ಕೀಳಾಗಿ ಕಂಡ ಡಿ ಗ್ಯಾಂಗ್‌ ತಮ್ಮ ಸಾಕು ನಾಯಿಗಳನ್ನು ಸಂತ್ರಸ್ತ ಕುಟುಂಬದವರ ಮೇಲೆ ದಾಳಿ ಮಾಡಲು ಬಿಡುತ್ತಿದ್ದರಂತೆ. ಸ್ವಲ್ಪ ದಿನಗಳ ಬಳಿಕ ಮೈಸೂರಿನ ಖಾಸಗಿ ಹೋಟೆಲ್‌ಕೆ ಬರಹೇಳಿ ಅಲ್ಲಿ ಸ್ಥಳೀಯ ರೌಡಿಗಳಿಂದ ಬೆದರಿಕೆ ಹಾಕಿದ್ದು, ಈ ವಿಚಾರ ಹೊರಗೆ ಬಾಯಿ ಬಿಟ್ಟರೇ ಸುಮ್ಮನೇ ಬಿಡುವುದಿಲ್ಲ ಎಂದು ಗದರಿಸಿದ್ದರು ಎಂದು ಸಂತ್ರಸ್ತರ ಕುಟುಂಬ ಖಾಸಗಿ ವಾಹಿನಿಯಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

10 hours ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

11 hours ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

12 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

12 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

13 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

14 hours ago