ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್ ಭಟ್ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡನ್ನೂ ಯೋಗರಾಜ್ ಭಟ್ ಬರೆದಿದ್ದಾರೆ.
ಇದೊಂದು ಯುಗಳ ಗೀತೆಯಾಗಿದ್ದು, ‘ಮನಸ್ಸು ಹಾಡ್ತಿದೆ ವಯಸ್ಸು ಕಾಡ್ತದೆ …’ ಎಂದು ಸಾಗುತ್ತದೆ. ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.
ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗೀತ ರಚನೆಕಾರ ರಾಮ್ನಾರಾಯಣ್ ನಿರ್ದೇಶನ ಮಾಡಿದ್ದಾರೆ.
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಯೋಗರಾಜ್ ಭಟ್ ಮತ್ತು ಇಸ್ಲಾಮುದ್ದೀನ್ ಕಥೆ ರಚಿಸಿದ್ದಾರೆ.
ಮಡೆನೂರು ಮನು, ಇದಕ್ಕೂ ಮೊದಲು ‘ಕೇದಾರನಾಥ್ ಕುರಿ ಫಾರಂ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಅದಕ್ಕೂ ಮುನ್ನ ‘ಹಳ್ಳಿ ಹೈಕ್ಳು ಪ್ಯಾಟೆ ಲೈಫು’ ಚಿತ್ರದಲ್ಲೂ ನಟಿಸಿದ್ದರು. ಈ ಎರಡೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಮನು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರವಾದರೂ ಅವರಿಗೆ ಗೆಲುವು ತಂದುಕೊಡುತ್ತದಾ ಎಂದು ನೋಡಬೇಕಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…