ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡನ್ನೂ ಯೋಗರಾಜ್‍ ಭಟ್‍ ಬರೆದಿದ್ದಾರೆ.

ಇದೊಂದು ಯುಗಳ ಗೀತೆಯಾಗಿದ್ದು, ‘ಮನಸ್ಸು ಹಾಡ್ತಿದೆ ವಯಸ್ಸು ಕಾಡ್ತದೆ …’ ಎಂದು ಸಾಗುತ್ತದೆ. ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗೀತ ರಚನೆಕಾರ ರಾಮ್‍ನಾರಾಯಣ್‍ ನಿರ್ದೇಶನ ಮಾಡಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಮತ್ತು ಇಸ್ಲಾಮುದ್ದೀನ್‍ ಕಥೆ ರಚಿಸಿದ್ದಾರೆ.

ಮಡೆನೂರು ಮನು, ಇದಕ್ಕೂ ಮೊದಲು ‘ಕೇದಾರನಾಥ್‍ ಕುರಿ ಫಾರಂ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಅದಕ್ಕೂ ಮುನ್ನ ‘ಹಳ್ಳಿ ಹೈಕ್ಳು ಪ್ಯಾಟೆ ಲೈಫು’ ಚಿತ್ರದಲ್ಲೂ ನಟಿಸಿದ್ದರು. ಈ ಎರಡೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಮನು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರವಾದರೂ ಅವರಿಗೆ ಗೆಲುವು ತಂದುಕೊಡುತ್ತದಾ ಎಂದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

9 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

9 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

9 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

10 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

10 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

18 hours ago