ಮನರಂಜನೆ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಿಂದ ಬಂತು ಇನ್ನೊಂದು ಹಾಡು; ಈ ಬಾರಿ ಆನೆಯಿಂದ ಬಿಡುಗಡೆ

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ ಮಾಡಲಾಗಿದ್ದು, ಈ ಹಾಡನ್ನೂ ಯೋಗರಾಜ್‍ ಭಟ್‍ ಬರೆದಿದ್ದಾರೆ.

ಇದೊಂದು ಯುಗಳ ಗೀತೆಯಾಗಿದ್ದು, ‘ಮನಸ್ಸು ಹಾಡ್ತಿದೆ ವಯಸ್ಸು ಕಾಡ್ತದೆ …’ ಎಂದು ಸಾಗುತ್ತದೆ. ಈ ಹಾಡನ್ನು ಸೋನು ನಿಗಂ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಮನೋಮೂರ್ತಿ ಸಂಗೀತ ಸಂಯೋಜಿಸಿದ್ದಾರೆ. ಮನೋಮೂರ್ತಿ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಬಿಡುಗಡೆಯಾಗಿದೆ.

ಯೋಗರಾಜ್ ಸಿನಿಮಾಸ್ ಅರ್ಪಿಸುತ್ತಿರುವ ಈ ಚಿತ್ರವನ್ನು ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಹಾಗೂ ವಿದ್ಯಾ ದಂಪತಿ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರವನ್ನು ಗೀತ ರಚನೆಕಾರ ರಾಮ್‍ನಾರಾಯಣ್‍ ನಿರ್ದೇಶನ ಮಾಡಿದ್ದಾರೆ.

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ಮಡೆನೂರು ಮನು, ಮೌನ ಗುಡ್ಡೆಮನೆ, ಶರತ್ ಲೋಹಿತಾಶ್ವ, ತಬಲ ನಾಣಿ, ಸೋನಾಲ್ ಮೊಂತೆರೊ, ಕರಿಸುಬ್ಬು, ಡ್ಯಾಗನ್ ಮಂಜು, ಸೀನ ಮುಂತಾದವರು ನಟಿಸಿದ್ದಾರೆ. ಈ ಚಿತ್ರಕ್ಕೆ ಯೋಗರಾಜ್‍ ಭಟ್‍ ಮತ್ತು ಇಸ್ಲಾಮುದ್ದೀನ್‍ ಕಥೆ ರಚಿಸಿದ್ದಾರೆ.

ಮಡೆನೂರು ಮನು, ಇದಕ್ಕೂ ಮೊದಲು ‘ಕೇದಾರನಾಥ್‍ ಕುರಿ ಫಾರಂ’ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಅದಕ್ಕೂ ಮುನ್ನ ‘ಹಳ್ಳಿ ಹೈಕ್ಳು ಪ್ಯಾಟೆ ಲೈಫು’ ಚಿತ್ರದಲ್ಲೂ ನಟಿಸಿದ್ದರು. ಈ ಎರಡೂ ಚಿತ್ರಗಳು ಅಷ್ಟೇನೂ ಸದ್ದು ಮಾಡಲಿಲ್ಲ. ಈಗ ಮನು ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದಲ್ಲಿ ನಟಿಸಿದ್ದು, ಈ ಚಿತ್ರವಾದರೂ ಅವರಿಗೆ ಗೆಲುವು ತಂದುಕೊಡುತ್ತದಾ ಎಂದು ನೋಡಬೇಕಿದೆ.

ಆಂದೋಲನ ಡೆಸ್ಕ್

Recent Posts

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

3 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

23 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

24 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

24 hours ago