ಮನರಂಜನೆ

ಇಡೀ ‘ಪರಪಂಚವೇ ಘಮ ಘಮ’ ಅಂತಿದ್ದಾರೆ ಆ್ಯಂಟೋನಿ ದಾಸನ್‍

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ ಎಂಬ ಹಾಡನ್ನು ಹಾಡಿದ್ದು, ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಸಾಮಾನ್ಯವಾಗಿ ಆ್ಯಂಟೋನಿ ದಾಸನ್‍ ಅವರ ಹಾಡುಗಳು ಎಂದರೆ ಅದು ಮಾಸ್‍ ಹಾಡಾಗಿರುತ್ತದೆ ಎಂಬ ನಂಬಿಕೆ ಕೇಳುಗರಲ್ಲಿದೆ. ಆದರೆ, ಇದೇ ಮೊದಲ ಬಾರಿಗೆ ‘ಪೌಡರ್’ ಚಿತ್ರದ ಈ ಲಯ ಪ್ರಧಾನ ಗೀತೆಗೆ ದಾಸನ್‍ ಧ್ವನಿಯಾಗಿರುವುದು ವಿಶೇಷ.

KRG ಸ್ಟುಡಿಯೋಸ್‍ ಮತ್ತು TVF ಮೋಷನ್ ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸಿರುವ ಚಿತ್ರ ‘ಪೌಡರ್‍’. ಕಳೆದ ವರ್ಷದ ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಪ್ರಾರಂಭವಾಗಿತ್ತು. ಮೊದಲು ಏಪ್ರಿಲ್‍ ಬಿಡುಗಡೆ ಎಂದು ಹೇಳಲಾಗಿತ್ತಾದರೂ, ಈಗ ಅಂತಿಮವಾಗಿ ಆಗಸ್ಟ್ 23ಕ್ಕೆ ರಾಜ್ಯಾದ್ಯಮತ ಬಿಡುಗಡೆಯಾಗುತ್ತಿದೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು, ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್’ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಚಿತ್ರದಲ್ಲಿ ತಮಾಷೆಯಾಗಿ ತೋರಿಸಲಾಗಿದೆ. ಈ ಪೌಡರ್‍ನಿಂದ ಅವರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಯುತ್ತದಾ? ಅವರ ಎಲ್ಲಾ ಕನಸುಗಳು ನನಸಾಗುವುದೇ? ಎಂಬುದು ಚಿತ್ರದ ಸಾರಾಂಶ.

ಈ ಹಿಂದೆ ‘ಗುಳ್ಟು’ ಚಿತ್ರವನ್ನು ನಿರ್ದೇಶಿಸಿದ್ದ ಜನಾರ್ದನ್ ಚಿಕ್ಕಣ್ಣ, ಈ ಚಿತ್ರವನ್ನು ನಿರ್ದೇಶಿಸಿದ್ದು, ದೀಪಕ್‍ ವೆಂಕಟೇಶನ್‍ ಕಥೆ ರಚಿಸಿದ್ದಾರೆ. ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಭೂಮಿಕಾ

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago