ಮನರಂಜನೆ

ಇಡೀ ‘ಪರಪಂಚವೇ ಘಮ ಘಮ’ ಅಂತಿದ್ದಾರೆ ಆ್ಯಂಟೋನಿ ದಾಸನ್‍

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ ಎಂಬ ಹಾಡನ್ನು ಹಾಡಿದ್ದು, ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಸಾಮಾನ್ಯವಾಗಿ ಆ್ಯಂಟೋನಿ ದಾಸನ್‍ ಅವರ ಹಾಡುಗಳು ಎಂದರೆ ಅದು ಮಾಸ್‍ ಹಾಡಾಗಿರುತ್ತದೆ ಎಂಬ ನಂಬಿಕೆ ಕೇಳುಗರಲ್ಲಿದೆ. ಆದರೆ, ಇದೇ ಮೊದಲ ಬಾರಿಗೆ ‘ಪೌಡರ್’ ಚಿತ್ರದ ಈ ಲಯ ಪ್ರಧಾನ ಗೀತೆಗೆ ದಾಸನ್‍ ಧ್ವನಿಯಾಗಿರುವುದು ವಿಶೇಷ.

KRG ಸ್ಟುಡಿಯೋಸ್‍ ಮತ್ತು TVF ಮೋಷನ್ ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸಿರುವ ಚಿತ್ರ ‘ಪೌಡರ್‍’. ಕಳೆದ ವರ್ಷದ ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಪ್ರಾರಂಭವಾಗಿತ್ತು. ಮೊದಲು ಏಪ್ರಿಲ್‍ ಬಿಡುಗಡೆ ಎಂದು ಹೇಳಲಾಗಿತ್ತಾದರೂ, ಈಗ ಅಂತಿಮವಾಗಿ ಆಗಸ್ಟ್ 23ಕ್ಕೆ ರಾಜ್ಯಾದ್ಯಮತ ಬಿಡುಗಡೆಯಾಗುತ್ತಿದೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು, ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್’ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಚಿತ್ರದಲ್ಲಿ ತಮಾಷೆಯಾಗಿ ತೋರಿಸಲಾಗಿದೆ. ಈ ಪೌಡರ್‍ನಿಂದ ಅವರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಯುತ್ತದಾ? ಅವರ ಎಲ್ಲಾ ಕನಸುಗಳು ನನಸಾಗುವುದೇ? ಎಂಬುದು ಚಿತ್ರದ ಸಾರಾಂಶ.

ಈ ಹಿಂದೆ ‘ಗುಳ್ಟು’ ಚಿತ್ರವನ್ನು ನಿರ್ದೇಶಿಸಿದ್ದ ಜನಾರ್ದನ್ ಚಿಕ್ಕಣ್ಣ, ಈ ಚಿತ್ರವನ್ನು ನಿರ್ದೇಶಿಸಿದ್ದು, ದೀಪಕ್‍ ವೆಂಕಟೇಶನ್‍ ಕಥೆ ರಚಿಸಿದ್ದಾರೆ. ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಭೂಮಿಕಾ

Recent Posts

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 mins ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

27 mins ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

1 hour ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

9 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

9 hours ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

9 hours ago