ಮನರಂಜನೆ

ಇಡೀ ‘ಪರಪಂಚವೇ ಘಮ ಘಮ’ ಅಂತಿದ್ದಾರೆ ಆ್ಯಂಟೋನಿ ದಾಸನ್‍

ತಮಿಳಿನ ಖ್ಯಾತ ಜನಪದ ಗಾಯಕ ಮತ್ತು ಕನ್ನಡದಲ್ಲಿ ‘ಟಗರು ಬಂತು ಟಗರು’, ‘ಸೂರಿ ಅಣ್ಣಾ’ ಮುಂತಾದ ಜನಪ್ರಿಯ ಹಾಡುಗಳನ್ನು ಹಾಡಿರುವ ಅ್ಯಂಟೋನಿ ದಾಸನ್‍ ಈಗ ಕನ್ನಡದಲ್ಲಿ ಇನ್ನೊಂದು ಹಾಡನ್ನು ಹಾಡಿದ್ದಾರೆ. ಈ ಬಾರಿ ಅವರು ‘ಪೌಡರ್‍’ ಚಿತ್ರಕ್ಕೆ ‘ಪರಪಂಚವೇ ಘಮ ಘಮ’ ಎಂಬ ಹಾಡನ್ನು ಹಾಡಿದ್ದು, ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಸಾಮಾನ್ಯವಾಗಿ ಆ್ಯಂಟೋನಿ ದಾಸನ್‍ ಅವರ ಹಾಡುಗಳು ಎಂದರೆ ಅದು ಮಾಸ್‍ ಹಾಡಾಗಿರುತ್ತದೆ ಎಂಬ ನಂಬಿಕೆ ಕೇಳುಗರಲ್ಲಿದೆ. ಆದರೆ, ಇದೇ ಮೊದಲ ಬಾರಿಗೆ ‘ಪೌಡರ್’ ಚಿತ್ರದ ಈ ಲಯ ಪ್ರಧಾನ ಗೀತೆಗೆ ದಾಸನ್‍ ಧ್ವನಿಯಾಗಿರುವುದು ವಿಶೇಷ.

KRG ಸ್ಟುಡಿಯೋಸ್‍ ಮತ್ತು TVF ಮೋಷನ್ ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸಿರುವ ಚಿತ್ರ ‘ಪೌಡರ್‍’. ಕಳೆದ ವರ್ಷದ ವರಮಹಾಲಕ್ಷ್ಮೀ ಹಬ್ಬಕ್ಕೆ ಚಿತ್ರ ಪ್ರಾರಂಭವಾಗಿತ್ತು. ಮೊದಲು ಏಪ್ರಿಲ್‍ ಬಿಡುಗಡೆ ಎಂದು ಹೇಳಲಾಗಿತ್ತಾದರೂ, ಈಗ ಅಂತಿಮವಾಗಿ ಆಗಸ್ಟ್ 23ಕ್ಕೆ ರಾಜ್ಯಾದ್ಯಮತ ಬಿಡುಗಡೆಯಾಗುತ್ತಿದೆ.

ಇದೊಂದು ಕಾಮಿಡಿ ಚಿತ್ರವಾಗಿದ್ದು, ಇಬ್ಬರು ಯುವಕರು ಒಂದು ನಿಗೂಢವಾದ ‘ಪೌಡರ್’ ಪ್ರಭಾವದಿಂದಾಗಿ ಧಿಡೀರನೇ ಸಿರಿವಂತರಾಗಲು ಮಾಡುವ ಪ್ರಯತ್ನಗಳು, ಅವರಿಗೆ ಎದುರಾಗುವ ಸಮಸ್ಯೆಗಳು ಇವೆಲ್ಲವನ್ನೂ ಚಿತ್ರದಲ್ಲಿ ತಮಾಷೆಯಾಗಿ ತೋರಿಸಲಾಗಿದೆ. ಈ ಪೌಡರ್‍ನಿಂದ ಅವರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಯುತ್ತದಾ? ಅವರ ಎಲ್ಲಾ ಕನಸುಗಳು ನನಸಾಗುವುದೇ? ಎಂಬುದು ಚಿತ್ರದ ಸಾರಾಂಶ.

ಈ ಹಿಂದೆ ‘ಗುಳ್ಟು’ ಚಿತ್ರವನ್ನು ನಿರ್ದೇಶಿಸಿದ್ದ ಜನಾರ್ದನ್ ಚಿಕ್ಕಣ್ಣ, ಈ ಚಿತ್ರವನ್ನು ನಿರ್ದೇಶಿಸಿದ್ದು, ದೀಪಕ್‍ ವೆಂಕಟೇಶನ್‍ ಕಥೆ ರಚಿಸಿದ್ದಾರೆ. ಚಿತ್ರದಲ್ಲಿ ದಿಗಂತ್ ಮಂಚಾಲೆ, ಧನ್ಯ ರಾಮ್ ಕುಮಾರ್, ಅನಿರುದ್ಧ್ ಆಚಾರ್ಯ, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ.

ಭೂಮಿಕಾ

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

3 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

4 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

5 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

5 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

6 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

6 hours ago