ಮನರಂಜನೆ

‘ಹಗ್ಗ’ ಹಿಡಿದು ಬಂದ ಅನು ಪ್ರಭಾಕರ್ ; ಆಗಸ್ಟ್‌ ನಲ್ಲಿ ಚಿತ್ರ ತೆರೆಗೆ

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ‘ಹಗ್ಗ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೋಷನ್‍ ಪೋಸ್ಟರ್‍ನಲ್ಲಿ ಅನು ಪ್ರಭಾಕರ್‍ ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಗ್ಗದ ಒಂದು ತುದಿಯನ್ನು ಅವರು ಹಿಡಿದರೆ, ಇನ್ನೊಂದು ತುದಿಯನ್ನು ನಾಯಕ ವೇಣು ಹಿಡಿದಿದ್ದಾರೆ. ಈ ಹಗ್ಗಕ್ಕೂ ಅವರಿಬ್ಬರಿಗೂ ಏನು ಸಂಬಂಧ? ಈ ಹಗ್ಗದಿಂದ ಯಾರ್ಯಾರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅಂದಹಾಗೆ, ಚಿತ್ರವು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

‘ಹಗ್ಗ’ ಚಿತ್ರಕ್ಕೆ ನಿರ್ಮಾಪಕ ರಾಜ್‍ ಭಾರದ್ವಾಜ್‍ ಕಥೆ ಬರೆದಿದ್ದು, ಚಿತ್ರಕಥೆಯನನ್ನು ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಜೊತೆಯಾಗಿ ಬರೆದಿದ್ದಾರೆ.

ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ಮತ್ತು ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಪೌತಿ ಖಾತಾ ಅರ್ಜಿ ಶೀಘ್ರ ವಿಲೇವಾರಿ ಮಾಡಿ : ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸೂಚನೆ

ಮಂಡ್ಯ : ಪೌತಿ ಖಾತಾ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು. ಮುಂದಿನ ಆರು ತಿಂಗಳುಗಳೊಳಗೆ ಪೌತಿ ಖಾತಾ ಆಂದೋಲನದಲ್ಲಿ ಯಾವುದೇ…

10 mins ago

ಜಿ-ರಾಮ್‌ಜಿ ವಾಪಸ್‌ ಪಡೆಯಿರಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಉದ್ಯೋಗ ಖಾತರಿಯನ್ನು ಇಲ್ಲವಾಗಿಸುವ ಮತ್ತು ಒಕ್ಕೂಟ ವ್ಯವಸ್ಥೆಯ ಆಶಯಗಳಿಗೆ ವ್ಯತಿರಿಕ್ತವಾಗಿರುವ ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು…

59 mins ago

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

2 hours ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

3 hours ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

4 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

4 hours ago