ಮನರಂಜನೆ

‘ಹಗ್ಗ’ ಹಿಡಿದು ಬಂದ ಅನು ಪ್ರಭಾಕರ್ ; ಆಗಸ್ಟ್‌ ನಲ್ಲಿ ಚಿತ್ರ ತೆರೆಗೆ

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ‘ಹಗ್ಗ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೋಷನ್‍ ಪೋಸ್ಟರ್‍ನಲ್ಲಿ ಅನು ಪ್ರಭಾಕರ್‍ ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಗ್ಗದ ಒಂದು ತುದಿಯನ್ನು ಅವರು ಹಿಡಿದರೆ, ಇನ್ನೊಂದು ತುದಿಯನ್ನು ನಾಯಕ ವೇಣು ಹಿಡಿದಿದ್ದಾರೆ. ಈ ಹಗ್ಗಕ್ಕೂ ಅವರಿಬ್ಬರಿಗೂ ಏನು ಸಂಬಂಧ? ಈ ಹಗ್ಗದಿಂದ ಯಾರ್ಯಾರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅಂದಹಾಗೆ, ಚಿತ್ರವು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

‘ಹಗ್ಗ’ ಚಿತ್ರಕ್ಕೆ ನಿರ್ಮಾಪಕ ರಾಜ್‍ ಭಾರದ್ವಾಜ್‍ ಕಥೆ ಬರೆದಿದ್ದು, ಚಿತ್ರಕಥೆಯನನ್ನು ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಜೊತೆಯಾಗಿ ಬರೆದಿದ್ದಾರೆ.

ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ಮತ್ತು ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಸೋನ್ ಹಿಲ್ ಬಳಿಯ ಕಸದ ರಾಶಿ ತೆರವು ಕಾರ್ಯ ಶುರು

ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ…

1 hour ago

ಗ್ಯಾಂಗ್ರಿನ್‌ಗೆ ಬೇಡ ಭಯ; ಮಾನಸ ಆಸ್ಪತ್ರೆಯಲ್ಲಿ ಚಿಕಿತ್ಸೆ ಅಭಯ

ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…

1 hour ago

ನಂಜನಗೂಡಿಗೆ ಬಸ್ ಹತ್ತಿದರೆ ತಿ.ನರಸೀಪುರದ ಟಿಕೆಟ್!

ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…

2 hours ago

ಕೋರ್ಟ್ ಮೆಟ್ಟಿಲೇರಿದ್ದ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ತೆರೆ

ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…

2 hours ago

ಸಿಎಂ ತವರಲ್ಲಿ ಮಾರ್ಚ್‌ನಲ್ಲಿ ಅಕ್ಕ ಕೆಫೆ ಶುರು

ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…

2 hours ago