ಮನರಂಜನೆ

‘ಹಗ್ಗ’ ಹಿಡಿದು ಬಂದ ಅನು ಪ್ರಭಾಕರ್ ; ಆಗಸ್ಟ್‌ ನಲ್ಲಿ ಚಿತ್ರ ತೆರೆಗೆ

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ‘ಹಗ್ಗ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೋಷನ್‍ ಪೋಸ್ಟರ್‍ನಲ್ಲಿ ಅನು ಪ್ರಭಾಕರ್‍ ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಗ್ಗದ ಒಂದು ತುದಿಯನ್ನು ಅವರು ಹಿಡಿದರೆ, ಇನ್ನೊಂದು ತುದಿಯನ್ನು ನಾಯಕ ವೇಣು ಹಿಡಿದಿದ್ದಾರೆ. ಈ ಹಗ್ಗಕ್ಕೂ ಅವರಿಬ್ಬರಿಗೂ ಏನು ಸಂಬಂಧ? ಈ ಹಗ್ಗದಿಂದ ಯಾರ್ಯಾರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅಂದಹಾಗೆ, ಚಿತ್ರವು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

‘ಹಗ್ಗ’ ಚಿತ್ರಕ್ಕೆ ನಿರ್ಮಾಪಕ ರಾಜ್‍ ಭಾರದ್ವಾಜ್‍ ಕಥೆ ಬರೆದಿದ್ದು, ಚಿತ್ರಕಥೆಯನನ್ನು ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಜೊತೆಯಾಗಿ ಬರೆದಿದ್ದಾರೆ.

ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ಮತ್ತು ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

7 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

7 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

7 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

10 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

10 hours ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

10 hours ago