ಮನರಂಜನೆ

‘ಹಗ್ಗ’ ಹಿಡಿದು ಬಂದ ಅನು ಪ್ರಭಾಕರ್ ; ಆಗಸ್ಟ್‌ ನಲ್ಲಿ ಚಿತ್ರ ತೆರೆಗೆ

ಅನು ಪ್ರಭಾಕರ್‍ ಇತ್ತೀಚೆಗೆ ಚಿತ್ರದಿಂದ ಚಿತ್ರಕ್ಕೆ ವಿಭಿನ್ನ ಪ್ರಯತ್ನ ಮತ್ತು ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಬಿಡುಗಡೆಯಾದ ‘ಮೆಲೋಡಿ ಡ್ರಾಮಾ’ ಎಂಬ ಚಿತ್ರದಲ್ಲಿ ಅವರು ಮೊದಲ ಬಾರಿಗೆ ವಿಲನ್ ಆಗಿ ಕಾಣಿಸಿಕೊಂಡಿದ್ದರು. ಈಗ ಅವರು ಸದ್ದಿಲ್ಲದೆ ಇನ್ನೊಂದು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ.

ವಸಂತ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜ್ ಭಾರದ್ವಾಜ್ ನಿರ್ಮಿಸಿರುವ, ಅವಿನಾಶ್ ಎನ್ ನಿರ್ದೇಶನದ ‘ಹಗ್ಗ’ ಚಿತ್ರದ ಮೋಷನ್ ಪೋಸ್ಟರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಈ ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಮೋಷನ್‍ ಪೋಸ್ಟರ್‍ನಲ್ಲಿ ಅನು ಪ್ರಭಾಕರ್‍ ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಹಗ್ಗದ ಒಂದು ತುದಿಯನ್ನು ಅವರು ಹಿಡಿದರೆ, ಇನ್ನೊಂದು ತುದಿಯನ್ನು ನಾಯಕ ವೇಣು ಹಿಡಿದಿದ್ದಾರೆ. ಈ ಹಗ್ಗಕ್ಕೂ ಅವರಿಬ್ಬರಿಗೂ ಏನು ಸಂಬಂಧ? ಈ ಹಗ್ಗದಿಂದ ಯಾರ್ಯಾರ ಜೀವನದಲ್ಲಿ ಏನೆಲ್ಲಾ ಆಗುತ್ತದೆ ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅಂದಹಾಗೆ, ಚಿತ್ರವು ಆಗಸ್ಟ್ ತಿಂಗಳಲ್ಲಿ ಬಿಡುಗಡೆಯಾಗಲಿದೆ.

‘ಹಗ್ಗ’ ಚಿತ್ರಕ್ಕೆ ನಿರ್ಮಾಪಕ ರಾಜ್‍ ಭಾರದ್ವಾಜ್‍ ಕಥೆ ಬರೆದಿದ್ದು, ಚಿತ್ರಕಥೆಯನನ್ನು ರಾಜ್ ಭಾರದ್ವಾಜ್, ಅವಿನಾಶ್ ಹಾಗೂ ಮನೋಹರ್ ಜೊತೆಯಾಗಿ ಬರೆದಿದ್ದಾರೆ.

ಚಿತ್ರದಲ್ಲಿ ಅನು ಪ್ರಭಾಕರ್, ವೇಣು, ಹರ್ಷಿಕಾ ಪೂಣಚ್ಛ, ತಬಲನಾಣಿ, ಅವಿನಾಶ್, ಭವಾನಿ ಪ್ರಕಾಶ್, ಸುಧಾ ಬೆಳವಾಡಿ, ಪ್ರಿಯ ಹೆಗ್ಡೆ, ಮೈಕೋ ಮಂಜು, ಸಂಜು ಬಸಯ್ಯ, ಸದಾನಂದ ಕಾಳಿ ಮುಂತಾದವರು ತಾರಾಬಳಗದಲ್ಲಿದ್ದಾರೆ.

ಈ ಚಿತ್ರಕ್ಕೆ ಮ್ಯಾಥ್ಯೂಸ್ ಮನು ಸಂಗೀತ ಮತ್ತು ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

2 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

2 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

4 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

4 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

9 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

9 hours ago