ಮನರಂಜನೆ

ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷ ಪೂರೈಸಿದ ಅನು ಪ್ರಭಾಕರ್

ನಟಿ ಅನು ಪ್ರಭಾಕರ್‍, ಕನ್ನಡ ಚಿತ್ರರಂಗಕ್ಕೆ ಬಾಲನಟಿಯಾಗಿ ಬಂದವರು. ಒಂದಿಷ್ಟು ಚಿತ್ರಗಳಲ್ಲಿ ಕಾಣಿಸಿಕೊಂಡ ನಂತರ ಶಿವರಾಜಕುಮಾರ್ ಅಭಿನಯದ ‘ಹೃದಯ ಹೃದಯ’ ಚಿತ್ರದ ಮೂಲಕ ನಾಯಕಿಯಾದರು. ಅವರು ನಾಯಕಿಯಾಗಿ ಇದೀಗ 25 ವರ್ಷಗಳನ್ನು ಪೂರೈಸಿದ್ದಾರೆ.

ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಆ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ಈ 25 ವರ್ಷಗಳಲ್ಲಿ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಭಾನುವಾರಕ್ಕೆ (ಸೆ.15) ಅವರು ನಟಿಸಿದ ಮೊದಲ ಚಿತ್ರ ಬಿಡುಗಡೆಯಾಗಿ 25 ವರ್ಷಗಳಾಗಿವೆ.

ಹೀಗಿರುವಾಲೇ, ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಹಗ್ಗ’ ಚಿತ್ರವು ಸೆಪ್ಟೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಅನು ಪ್ರಭಾಕರ್‍ ಅಭಿನಯದ ಮೊದಲ ಚಿತ್ರ ಬಿಡುಗಡೆಯಾದ ದಿನವೇ ‘ಹಗ್ಗ’ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಚಿತ್ರತಂಡದವರು ಅನು ಪ್ರಭಾಕರ್‍ ಅವರನ್ನು ಗೌರವಿಸಿದ್ದಾರೆ. ಕೇಕ್‍ ಕಟ್ ಮಾಡುವ ಮೂಲಕ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.

25 ವರ್ಷಗಳು ಪೂರೈಸಿದ ಖುಷಿಯಲ್ಲಿ ಮಾತನಾಡಿದ ಅನು ಪ್ರಭಾಕರ್‍, ‘ಚಿತ್ರ ಕಳೆದ ತಿಂಗಳೇ ಬಿಡುಗಡೆಯಾಗಬೇಕಿತ್ತು. ಚಿತ್ರದ ಪ್ರಚಾರ ಸಹ ಸಾಕಷ್ಟು ಆಗಿತ್ತು. ಆದರೆ, ಕಾರಣಾಂತರಗಳಿಂದ ಮುಂದಕ್ಕೆ ಹೋಯಿತು. ಅದು ಒಳ್ಳೆಯದಕ್ಕೇ ಆಯಿತು ಅಂತನಿಸುತ್ತಿದೆ. ಒಂದೊಳ್ಳೆಯ ಸಂದರ್ಭದಲ್ಲಿ ನನ್ನ ಚಿತ್ರ ಬಿಡುಗಡೆ ಆಗುತ್ತಿದೆ’ ಎಂದರು.

ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದರ ಕುರಿತು ಮಾತನಾಡಿದ ಅವರು, ‘ನನ್ನ ಅಪ್ಪ-ಅಮ್ಮ ನನಗೆ ಅನ್ನಪೂರ್ಣ ಎಂದು ಹೆಸರಿಟ್ಟು ಬದುಕು ಕೊಟ್ಟರು. ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್‍ ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದರು. ಅನ್ನಪೂರ್ಣ ಆಗಿದ್ದವಳನ್ನು ಅನು ಮಾಡಿದರು. ಮಾಲಾಶ್ರೀ ತರಹವೇ ನನ್ನ ಹೆಸರನ್ನು ಅನುಶ್ರೀ ಎಂದು ಬದಲಾಯಿಸಬೇಕು ಎಂಬ ಆಸೆ ಅವರಿಗಿತ್ತು. ಆದರೆ, ನನಗೆ ಅನು ಪ್ರಭಾಕರ್‍ ಎಂದು ಗುರುತಿಸಿಕೊಳ್ಳುವಾಸೆ. ಹಾಗಾಗಿ, ಇದೇ ಹೆಸರಿರಲಿ ಎಂದೆ. ಅವರು ಒಪ್ಪಿದರು. ಅವರೆಲ್ಲರ ಪ್ರೀತಿ, ವಿಶ್ವಾಸದಿಂದ ನಾನು ಚಿತ್ರರಂಗದಲ್ಲಿ 25 ವರ್ಷ ಪೂರೈಸುವಂತಾಯಿತು’ ಎಂದರು.

ಹಾರರ್‍ ಚಿತ್ರಗಳೆಂದರೆ ತನಗೆ ಇಷ್ಟವಿಲ್ಲ ಎಂದೆನ್ನುವ ಅನು ಪ್ರಭಾಕರ್‍, ‘ನಾನು ಹಾರರ್ ಚಿತ್ರಗಳನ್ನು ನೋಡುವುದಿಲ್ಲ. ಆದರೂ ನಾನು ಒಪ್ಪಿದ್ದು ಅವಿನಾಧ್‍ ಹೇಳಿದ ಕಥೆಗಾಗಿ. ನನಗೆ ಅವರ ಸ್ಪಷ್ಟತೆ ಇಷ್ಟವಾಯ್ತು. ಅವರು ಏನು ಹೇಳಿದ್ದರೋ, ಅದನ್ನು ತೆರೆಯ ಮೇಲೆ ತಂದಿದ್ದರು. ಈ ಚಿತ್ರ ನನ್ನ ಪಾಲಿಗೆ ಬಹಳ ಕಷ್ಟವಾಗಿತ್ತು. ನನ್ನ ಭಾಗದ ಚಿತ್ರೀಕರಣ ರಾತ್ರಿ 7ಕ್ಕೆ ಶುರುವಾಗಿ ಬೆಳಗ್ಗೆ ಮುಗಿಯುತ್ತಿತ್ತು. ಆದರೆ, ನಾನು ಎಲ್ಲ ಹೋದ ಮೇಲೆ ಹೋಗಬೇಕಿತ್ತು. ಏಕೆಂದರೆ, ಮೇಕಪ್‍ ಹಾಕುವುದಕ್ಕೆ, ತೆಗೆಯುವುದಕ್ಕೆ ಎರಡು ತಾಸು ಬೇಕಾಗುತ್ತಿತ್ತು’ ಎಂದು ನೆನಪಿಸಿಕೊಂಡರು.

ಭೂಮಿಕಾ

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

3 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

3 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

3 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

3 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

5 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

6 hours ago