ಮನರಂಜನೆ

ಸುದೀಪ್‍ ಹುಟ್ಟುಹಬ್ಬಕ್ಕೆ ಅನೂಪ್‍ ಭಂಡಾರಿ ಹೊಸ ಸುದ್ದಿ

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.

ಇನ್ನೇನು, ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್‍ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್‍ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್‍ ಸರ್‍ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್‍ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್‍ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್‍ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್‍ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್‍ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್‍ ನಿರ್ಮಾಣದಲ್ಲಿ ಅನೂಪ್‍ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್‍ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್‍ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್‍ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.

 

ಭೂಮಿಕಾ

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

1 hour ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

2 hours ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

2 hours ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

2 hours ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

2 hours ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

3 hours ago