ಮನರಂಜನೆ

ಸುದೀಪ್‍ ಹುಟ್ಟುಹಬ್ಬಕ್ಕೆ ಅನೂಪ್‍ ಭಂಡಾರಿ ಹೊಸ ಸುದ್ದಿ

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.

ಇನ್ನೇನು, ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್‍ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್‍ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್‍ ಸರ್‍ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್‍ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್‍ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್‍ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್‍ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್‍ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್‍ ನಿರ್ಮಾಣದಲ್ಲಿ ಅನೂಪ್‍ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್‍ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್‍ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್‍ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.

 

ಭೂಮಿಕಾ

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯಕ್ಕೆ ಅನುಮತಿ : ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು  ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…

19 mins ago

ಅಧಿಕಾರ ಹಂಚಿಕೆ ಚರ್ಚೆ ಮಧ್ಯೆ ರಾಜ್ಯ ಬಜೆಟ್‌ಗೆ ದಿನಾಂಕ ನಿಗದಿ

ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…

1 hour ago

ಭಾರತದೊಂದಿಗಿನ ವ್ಯಾಪಾರ ಒಪ್ಪಂದ ಐತಿಹಾಸಿಕ : ಟ್ರಂಪ್ ಬಣ್ಣನೆ

ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…

3 hours ago

ಬಿಕ್ಲು ಶಿವ ಕೊಲೆ ಪ್ರಕರಣ : ಪೊಲೀಸರ ವಶವಾದ ಬೈರತಿ ಬಸವರಾಜು

ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…

4 hours ago

ಸರ್ಕಾರಿ ಅಧಿಕಾರಿಗಳಿಗೆ ಲೋಕಾ ಶಾಕ್‌ : ಮೈಸೂರು ಸೇರಿ ಹಲವೆಡೆ ದಾಳಿ

ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…

4 hours ago

ಭಾರತ್‌ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ಕಾರ್ಮಿಕ, ರೈತ ಮತ್ತು ’ಕಾರ್ಪೊರೇಟ್ ಪರ’ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ…

5 hours ago