ಮನರಂಜನೆ

ಸುದೀಪ್‍ ಹುಟ್ಟುಹಬ್ಬಕ್ಕೆ ಅನೂಪ್‍ ಭಂಡಾರಿ ಹೊಸ ಸುದ್ದಿ

ಸುದೀಪ್‍ ಅಭಿನಯದಲ್ಲಿ ‘ವಿಕ್ರಾಂತ್‍ ರೋಣ’ ನಂತರ ಅನೂಪ್‍ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.

ಇನ್ನೇನು, ಸುದೀಪ್‍ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್‍ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್‍ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್‍ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್‍ ಸರ್‍ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್‍ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್‍ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.

ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್‍ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್‍ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್‍ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್‍ ನಿರ್ಮಾಣದಲ್ಲಿ ಅನೂಪ್‍ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.

ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್‍ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್‍ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್‍ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.

 

ಭೂಮಿಕಾ

Recent Posts

ಬಿಸಿಲ ಝಳಕ್ಕೆ ನೀರಿಗಿಳಿಯುವ ಮುನ್ನಇರಲಿ ಎಚ್ಚರ..!

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…

1 hour ago

ಹಾಲಿ-ಮಾಜಿ ಶಾಸಕರಿಗೆ ಕ್ಷೇತ್ರ ಪುನರ್‌ವಿಂಗಡಣೆ ಗುಮ್ಮ!

ಕೆ.ಬಿ.ರಮೇಶನಾಯಕ ಶೇ.೩೩ ಮಹಿಳಾ ಮೀಸಲು ಜಾರಿಯಾದರೆ ಐದು ಸ್ಥಾನ ಮೀಸಲು  ಚಾಮುಂಡೇಶ್ವರಿ, ಕೃಷ್ಣರಾಜ, ನರಸಿಂಹರಾಜ ಕ್ಷೇತ್ರದ ಕೆಲ ಭಾಗಗಳನ್ನು ಬೇರ್ಪಡಿಸಿ…

1 hour ago

150 ವರ್ಷಕ್ಕೆ ಸಾಕ್ಷಿಯಾದ ಸರ್ಕಾರಿ ಶಾಲೆ!

ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯ ಮೇಲುಕೋಟೆ ಪ್ರಖ್ಯಾತ ಧಾರ್ಮಿಕ ಮತ್ತು ಐತಿಹಾಸಿಕ ಕ್ಷೇತ್ರವಾಗಿದ್ದು, ಹತ್ತಾರು ಶತಮಾನಗಳ ವಿಶೇಷತೆಗಳನ್ನು ಒಳಗೊಂಡಿದೆ. ಈ ಪಟ್ಟಿಯಲ್ಲಿ…

1 hour ago

ಸರಸ್ವತಿಪುರಂ ಕಲ್ಯಾಣಿಗೆ ಪುನಶ್ಚೇತನ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಮೈಸೂರು ಸಂಸ್ಥಾನದ ಕೊನೆಯ ಅರಸ, ದೇಶ ಸ್ವತಂತ್ರಗೊಂಡ ನಂತರ ರಾಜ ಪ್ರಮುಖರಾಗಿ ಸೇವೆ ಸಲ್ಲಿಸಿದ್ದ ಜಯಚಾಮರಾಜ ಒಡೆಯರ್…

1 hour ago

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ

ದ್ರಾವಿಡ ಚಳವಳಿಗಾರ ಡಾ.ಕೆ.ವೀರಮಣಿ ಅವರಿಗೆ ಬೋಧಿ ವೃಕ್ಷ ಪ್ರಶಸ್ತಿ   ಪೆರಿಯಾರ್ ರಾಮಸ್ವಾಮಿ ಅವರ ಸೈದ್ಧಾಂತಿಕ ಉತ್ತರಾಧಿಕಾರಿ ಬೆಂಗಳೂರು: ಮೌಢ್ಯ…

2 hours ago