ಸುದೀಪ್ ಅಭಿನಯದಲ್ಲಿ ‘ವಿಕ್ರಾಂತ್ ರೋಣ’ ನಂತರ ಅನೂಪ್ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.
ಇನ್ನೇನು, ಸುದೀಪ್ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್ ಸರ್ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.
ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್ ನಿರ್ಮಾಣದಲ್ಲಿ ಅನೂಪ್ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…