ಸುದೀಪ್ ಅಭಿನಯದಲ್ಲಿ ‘ವಿಕ್ರಾಂತ್ ರೋಣ’ ನಂತರ ಅನೂಪ್ ಭಂಡಾರಿ ಒಂದು ಹೊಸ ಚಿತ್ರ ಮಾಡುತ್ತಾರೆ ಎಂದು ಹೇಳಲಾಗಿತ್ತು. ಮೊದಲು ‘ಬಿಲ್ಲ ರಂಗ ಭಾಷಾ’ ಚಿತ್ರ ಮಾಡುತ್ತಾರೆ ಎಂದು ಸುದ್ದಿಯಾಗಿತ್ತು. ನಂತರ ‘ಅಶ್ವತ್ಥಾಮ’ ಎಂಬ ಇನ್ನೊಂದು ಚಿತ್ರ ಮಾಡಬಹುದು ಎಂದು ಹೇಳಲಾಗಿತ್ತು. ಆದರೆ, ಎರಡೂ ಚಿತ್ರಗಳು ಸೆಟ್ಟೇರಲೇ ಇಲ್ಲ.
ಇನ್ನೇನು, ಸುದೀಪ್ ಹುಟ್ಟುಹಬ್ಬಕ್ಕೆ (ಸೆ 02) ದಿನಗಣನೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಅನೂಪ್ ಭಂಡಾರಿ ಕಡೆಯಿಂದ ಹೊಸದೊಂದು ಸುದ್ದಿ ಬಂದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುರುವ ಅನೂಪ್ ಭಂಡಾರಿ, The Men will be right back ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ,’ ಸುದೀಪ್ ಸರ್ ಹುಟ್ಟುಹಬ್ಬದಂದು ಮತ್ತೆ ಭೇಟಿ ಆಗೋಣ’ ಎಂದು ಹೇಳಿಕೊಂಡಿದ್ದಾರೆ. ಸುದೀಪ್ ಜೊತೆಗೆ ಮತ್ತೊಮ್ಮೆ ಕೈಜೋಡಿಸುತ್ತಿರುವುದಾಗಿ ಹೇಳಿರುವ ಅನೂಪ್ ಭಂಡಾರಿ, ಸೆಪ್ಟೆಂಬರ್ 02ರಂದು ಹೊಸ ಸುದ್ದಿಯೊಂದನ್ನು ಘೋಷಿಸುವುದಾಗಿ ಹೇಳಿದ್ದಾರೆ.
ಇಷ್ಟಕ್ಕೂ ಆ ಸುದ್ದಿ ಏನು? ಈ ಮೊದಲು ಹೇಳಿದಂತೆ ಸುದೀಪ್ ಅಭಿನಯದಲ್ಲಿ ‘ಬಿಲ್ಲ ರಂಗ ಭಾಷ’ ಅಥವಾ ‘ಅಶ್ವತ್ಥಾಮ’ ಚಿತ್ರಗಳ ಬಗ್ಗೆ ಅನೂಪ್ ಭಂಡಾರಿ ಏನಾದರೂ ಹೇಳುತ್ತಾರಾ? ಅಥವಾ ಇವೆರಡೂ ಚಿತ್ರಗಳನ್ನು ಬಿಟ್ಟು ಸುದೀಪ್ ಅಭಿನಯದಲ್ಲಿ ಇನ್ನೊಂದು ಹೊಸ ಚಿತ್ರವನ್ನು ಅವರು ಘೋಷಿಸುತ್ತಾರಾ? ಅಥವಾ ಸುದೀಪ್ ನಿರ್ಮಾಣದಲ್ಲಿ ಅನೂಪ್ ಭಂಡಾರಿ ಏನಾದರೂ ಬೇರೆ ಚಿತ್ರ ಮಾಡುತ್ತಾರಾ? ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಹೆಚ್ಚಾಗಿದೆ.
ಸುದೀಪ್ ಅಭಿನಯದ ‘ಮ್ಯಾಕ್ಸ್’ ಚಿತ್ರವು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈಗಾಗಲಲೇ ಸುದೀಪ್ ಅಭಿನಯದಲ್ಲಿ ತಮಿಳು ನಿರ್ದೇಶಕ ಚೇರನ್, ಆರ್. ಚಂದ್ರು, KRG ಸ್ಟುಡಿಯೋಸ್ ಮುಂತಾದವರು ಹೊಸ ಚಿತ್ರಗಳನ್ನು ಘೋಷಿಸಿದ್ದಾರೆ. ಅವೆಲ್ಲವೂ ಯಾವಾಗ ಶುರುವಾಗುತ್ತವೋ ಗೊತ್ತಿಲ್ಲ. ಹೀಗಿರುವಾಗಲೇ, ಸುದೀಪ್ ಕಡೆಯಿಂದ ಇನ್ನೊಂದು ಹೊಸ ಚಿತ್ರ ಬರುವ ಸಾಧ್ಯತೆ ಇದೆ. ಇಷರಟಕ್ಕೂ ಯಾವುದಾ ಚಿತ್ರ? ಸೆ. 02ರವರೆಗೂ ಕಾಯಬೇಕು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…